ಚಿತ್ರದುರ್ಗ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ ವಿರಾಮ ಇರಲಿದೆ. ₹ 100 ಟಿಕೆಟ್ ನಿಗದಿಪಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಹಾಗೂ www.rangayana.org ಜಾಲತಾಣದಲ್ಲಿ ಟಿಕೆಟ್ ಲಭ್ಯ ಇವೆ ಎಂದು ನಾಟಕವನ್ನು ರಚಿಸಿ ನಿರ್ದೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.
‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.
‘
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…