ಚಿತ್ರದುರ್ಗ: ಟಿಪ್ಪು ಸುಲ್ತಾನ್ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.
ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ ವಿರಾಮ ಇರಲಿದೆ. ₹ 100 ಟಿಕೆಟ್ ನಿಗದಿಪಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಹಾಗೂ www.rangayana.org ಜಾಲತಾಣದಲ್ಲಿ ಟಿಕೆಟ್ ಲಭ್ಯ ಇವೆ ಎಂದು ನಾಟಕವನ್ನು ರಚಿಸಿ ನಿರ್ದೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.
‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.
‘
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…