ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ
ಎಂ.ಯೋಗಾನಂದ
ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಈಚಿನ ವರ್ಷಗಳಲ್ಲಿ ತಂಬಾಕಿಗೆ ಉತ್ತಮ ಬೆಲೆ ದೊರೆಯದೆ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ವರ್ಷ ನಿರೀಕ್ಷೆಗಿಂತ ಹೆಚ್ಚಾಗಿ ಮಾರಾಟವಾಗುತ್ತಿರುವ ತಂಬಾಕಿನ ಬೆಲೆ ಒಂದೆಡೆಯಾದರೆ ತಂಬಾಕು ಹುಡಿಗೂ ಬೇಡಿಕೆ ಹೆಚ್ಚಾಗಿದೆ.
ಕೆಲವು ವರ್ಷಗಳಿಂದ ಹುಡಿಗೆ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡದೆ ರೈತರು ಮನೆಯ ಹತ್ತಿರ ಸಣ್ಣ ವ್ಯಾಪಾರಿಗಳಿಗೆ ಮಾರಾಟ ಮಾಡಿ ಕೈ ತೊಳೆದುಕೊಳ್ಳುತ್ತಿದ್ದರು. ಆದರೆ ಕೆಲವು ವರ್ಷಗಳಿಂದ ಹುಡಿಯನ್ನು ಮಾರುಕಟ್ಟೆಯಲ್ಲಿಯೇ ಮಾರಾಟ ಮಾಡಲು ಅವಕಾಶ ಕೊಡಿ ಎಂಬ ರೈತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ.
ಈಗ ಉತ್ತಮ ದರ್ಜೆಯ ತಂಬಾಕಿಗೆ ಸರಾಸರಿ ೨೫೦ ರೂ.ತನಕವೂ ದೊರೆಯುತ್ತಿದೆ. ರೈತರು ನೀರು ಹಾಕದೆ ಹಾಗೂ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬಂದರೆ ಇದೇ ಬೆಲೆ ಕೊಡಿಸಲು ಸಹಕಾರಿಯಾಗುತ್ತದೆ ಎಂದು ತಂಬಾಕು ಮಂಡಳಿಯ ಪ್ಲಾಟ್ ಫಾರಂ ನಂ. ೨ರ ಹರಾಜು ಅಧೀಕ್ಷಕ ಧನ್ರಾಜ್ ತಿಳಿಸಿದರು.
ತಂಬಾಕು ಹುಡಿಗೆ ಉತ್ತಮ ಬೇಡಿಕೆ ಇರುವುದರಿಂದ ಒಳ್ಳೆಯ ಬೆಲೆಗೆ ಮಾರಾಟವಾಗಿದೆ. ರೈತರು ಮುಂದಿನ ದಿನಗಳಲ್ಲಿ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬರಬೇಕು. ರೈತರು ಹೊರಗಡೆ ಹುಡಿಯನ್ನು ಮಾರಾಟ ಮಾಡಬಾರದು ಎಂದು ಆದಿನಾರಾಯಣ ಎಂಟರ್ಪ್ರೈಸಸ್ ಕಂಪೆನಿ ಅಧಿಕಾರಿ ಕೂಸಪ್ಪ ಸಲಹೆ ನೀಡಿದರು.
ಹಿಂದೆ ಹುಡಿಯನ್ನು ಕೆ.ಜಿ.ಗೆ ೧೫-೨೦ ರೂ. ಗಳಿಗೆ ಮನೆಯ ಹತ್ತಿರ ಮಾರಾಟ ಮಾಡಿಕೊಳ್ಳುತ್ತಿದ್ದೆವು. ಆದರೆ ಈ ವರ್ಷ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಉತ್ತಮ ಬೆಲೆ ಸಿಕ್ಕಿದೆ. ೧೩೦-೧೪೦ ರೂ.ತನಕ ದೊರೆಯುತ್ತಿದೆ. ಇದರಿಂದ ಖುಷಿಯಾಗುತ್ತಿದೆ. ಇದೇ ಬೆಲೆಯನ್ನು ಮುಂದೆುಯೂ ಕೊಟ್ಟರೆ ರೈತರಿಗೆ ಅನುಕೂಲವಾಗುತ್ತದೆ.
-ತಾಜು, ತಂಬಾಕು ಬೆಳೆಗಾರ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…