ಜಿಲ್ಲೆಗಳು

ತಂಬಾಕು ಹುಡಿಗೂ ಹೆಚ್ಚಿದ ಬೇಡಿಕೆ; ರೈತರಲ್ಲಿ ಸಂತಸ

ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ

ಎಂ.ಯೋಗಾನಂದ
ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಈಚಿನ ವರ್ಷಗಳಲ್ಲಿ ತಂಬಾಕಿಗೆ ಉತ್ತಮ ಬೆಲೆ ದೊರೆಯದೆ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ವರ್ಷ ನಿರೀಕ್ಷೆಗಿಂತ ಹೆಚ್ಚಾಗಿ ಮಾರಾಟವಾಗುತ್ತಿರುವ ತಂಬಾಕಿನ ಬೆಲೆ ಒಂದೆಡೆಯಾದರೆ ತಂಬಾಕು ಹುಡಿಗೂ ಬೇಡಿಕೆ ಹೆಚ್ಚಾಗಿದೆ.
ಕೆಲವು ವರ್ಷಗಳಿಂದ ಹುಡಿಗೆ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡದೆ ರೈತರು ಮನೆಯ ಹತ್ತಿರ ಸಣ್ಣ ವ್ಯಾಪಾರಿಗಳಿಗೆ ಮಾರಾಟ ಮಾಡಿ ಕೈ ತೊಳೆದುಕೊಳ್ಳುತ್ತಿದ್ದರು. ಆದರೆ ಕೆಲವು ವರ್ಷಗಳಿಂದ ಹುಡಿಯನ್ನು ಮಾರುಕಟ್ಟೆಯಲ್ಲಿಯೇ ಮಾರಾಟ ಮಾಡಲು ಅವಕಾಶ ಕೊಡಿ ಎಂಬ ರೈತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ.

ಈಗ ಉತ್ತಮ ದರ್ಜೆಯ ತಂಬಾಕಿಗೆ ಸರಾಸರಿ ೨೫೦ ರೂ.ತನಕವೂ ದೊರೆಯುತ್ತಿದೆ. ರೈತರು ನೀರು ಹಾಕದೆ ಹಾಗೂ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬಂದರೆ ಇದೇ ಬೆಲೆ ಕೊಡಿಸಲು ಸಹಕಾರಿಯಾಗುತ್ತದೆ ಎಂದು ತಂಬಾಕು ಮಂಡಳಿಯ  ಪ್ಲಾಟ್ ಫಾರಂ ನಂ. ೨ರ ಹರಾಜು ಅಧೀಕ್ಷಕ ಧನ್‌ರಾಜ್ ತಿಳಿಸಿದರು.

ತಂಬಾಕು ಹುಡಿಗೆ ಉತ್ತಮ ಬೇಡಿಕೆ ಇರುವುದರಿಂದ ಒಳ್ಳೆಯ ಬೆಲೆಗೆ ಮಾರಾಟವಾಗಿದೆ. ರೈತರು ಮುಂದಿನ ದಿನಗಳಲ್ಲಿ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬರಬೇಕು. ರೈತರು ಹೊರಗಡೆ ಹುಡಿಯನ್ನು ಮಾರಾಟ ಮಾಡಬಾರದು ಎಂದು ಆದಿನಾರಾಯಣ ಎಂಟರ್‌ಪ್ರೈಸಸ್ ಕಂಪೆನಿ ಅಧಿಕಾರಿ ಕೂಸಪ್ಪ ಸಲಹೆ ನೀಡಿದರು.

ಹಿಂದೆ ಹುಡಿಯನ್ನು ಕೆ.ಜಿ.ಗೆ ೧೫-೨೦ ರೂ. ಗಳಿಗೆ ಮನೆಯ ಹತ್ತಿರ ಮಾರಾಟ ಮಾಡಿಕೊಳ್ಳುತ್ತಿದ್ದೆವು. ಆದರೆ ಈ ವರ್ಷ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಉತ್ತಮ ಬೆಲೆ ಸಿಕ್ಕಿದೆ. ೧೩೦-೧೪೦ ರೂ.ತನಕ ದೊರೆಯುತ್ತಿದೆ. ಇದರಿಂದ ಖುಷಿಯಾಗುತ್ತಿದೆ. ಇದೇ ಬೆಲೆಯನ್ನು ಮುಂದೆುಯೂ ಕೊಟ್ಟರೆ ರೈತರಿಗೆ ಅನುಕೂಲವಾಗುತ್ತದೆ.

-ತಾಜು, ತಂಬಾಕು ಬೆಳೆಗಾರ

andolanait

Recent Posts

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

13 mins ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago