ಜಿಲ್ಲೆಗಳು

ತಂಬಾಕು ಹುಡಿಗೂ ಹೆಚ್ಚಿದ ಬೇಡಿಕೆ; ರೈತರಲ್ಲಿ ಸಂತಸ

ತಂಬಾಕು ಮಾರುಕಟ್ಟೆಯಲ್ಲೇ ಮಾರಾಟ ಮಾಡಲು ರೈತರಿಗೆ ಅಧಿಕಾರಿಗಳ ಸಲಹೆ

ಎಂ.ಯೋಗಾನಂದ
ಹುಣಸೂರು: ಈ ವರ್ಷ ತಂಬಾಕು ಬೆಳೆದ ರೈತನಿಗೆ ಸಮಾಧಾನ ತಂದಿದ್ದು, ಬೆಳೆದ ತಂಬಾಕಿಗೆ ಹಾಗೂ ತಂಬಾಕು ಹದಗೊಳಿಸುವಾಗ ಉದುರುವ ಹುಡಿಗೂ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದ್ದು, ತಂಬಾಕು ಇರುವ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
ಈಚಿನ ವರ್ಷಗಳಲ್ಲಿ ತಂಬಾಕಿಗೆ ಉತ್ತಮ ಬೆಲೆ ದೊರೆಯದೆ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ವರ್ಷ ನಿರೀಕ್ಷೆಗಿಂತ ಹೆಚ್ಚಾಗಿ ಮಾರಾಟವಾಗುತ್ತಿರುವ ತಂಬಾಕಿನ ಬೆಲೆ ಒಂದೆಡೆಯಾದರೆ ತಂಬಾಕು ಹುಡಿಗೂ ಬೇಡಿಕೆ ಹೆಚ್ಚಾಗಿದೆ.
ಕೆಲವು ವರ್ಷಗಳಿಂದ ಹುಡಿಗೆ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಅವಕಾಶ ನೀಡದೆ ರೈತರು ಮನೆಯ ಹತ್ತಿರ ಸಣ್ಣ ವ್ಯಾಪಾರಿಗಳಿಗೆ ಮಾರಾಟ ಮಾಡಿ ಕೈ ತೊಳೆದುಕೊಳ್ಳುತ್ತಿದ್ದರು. ಆದರೆ ಕೆಲವು ವರ್ಷಗಳಿಂದ ಹುಡಿಯನ್ನು ಮಾರುಕಟ್ಟೆಯಲ್ಲಿಯೇ ಮಾರಾಟ ಮಾಡಲು ಅವಕಾಶ ಕೊಡಿ ಎಂಬ ರೈತರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಡುತ್ತಿದ್ದಾರೆ.

ಈಗ ಉತ್ತಮ ದರ್ಜೆಯ ತಂಬಾಕಿಗೆ ಸರಾಸರಿ ೨೫೦ ರೂ.ತನಕವೂ ದೊರೆಯುತ್ತಿದೆ. ರೈತರು ನೀರು ಹಾಕದೆ ಹಾಗೂ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬಂದರೆ ಇದೇ ಬೆಲೆ ಕೊಡಿಸಲು ಸಹಕಾರಿಯಾಗುತ್ತದೆ ಎಂದು ತಂಬಾಕು ಮಂಡಳಿಯ  ಪ್ಲಾಟ್ ಫಾರಂ ನಂ. ೨ರ ಹರಾಜು ಅಧೀಕ್ಷಕ ಧನ್‌ರಾಜ್ ತಿಳಿಸಿದರು.

ತಂಬಾಕು ಹುಡಿಗೆ ಉತ್ತಮ ಬೇಡಿಕೆ ಇರುವುದರಿಂದ ಒಳ್ಳೆಯ ಬೆಲೆಗೆ ಮಾರಾಟವಾಗಿದೆ. ರೈತರು ಮುಂದಿನ ದಿನಗಳಲ್ಲಿ ಅನ್ಯ ಪದಾರ್ಥಗಳನ್ನು ಸೇರಿಸದೆ ಚೆನ್ನಾಗಿ ಬೇಲ್ ಮಾಡಿಕೊಂಡು ಬರಬೇಕು. ರೈತರು ಹೊರಗಡೆ ಹುಡಿಯನ್ನು ಮಾರಾಟ ಮಾಡಬಾರದು ಎಂದು ಆದಿನಾರಾಯಣ ಎಂಟರ್‌ಪ್ರೈಸಸ್ ಕಂಪೆನಿ ಅಧಿಕಾರಿ ಕೂಸಪ್ಪ ಸಲಹೆ ನೀಡಿದರು.

ಹಿಂದೆ ಹುಡಿಯನ್ನು ಕೆ.ಜಿ.ಗೆ ೧೫-೨೦ ರೂ. ಗಳಿಗೆ ಮನೆಯ ಹತ್ತಿರ ಮಾರಾಟ ಮಾಡಿಕೊಳ್ಳುತ್ತಿದ್ದೆವು. ಆದರೆ ಈ ವರ್ಷ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಉತ್ತಮ ಬೆಲೆ ಸಿಕ್ಕಿದೆ. ೧೩೦-೧೪೦ ರೂ.ತನಕ ದೊರೆಯುತ್ತಿದೆ. ಇದರಿಂದ ಖುಷಿಯಾಗುತ್ತಿದೆ. ಇದೇ ಬೆಲೆಯನ್ನು ಮುಂದೆುಯೂ ಕೊಟ್ಟರೆ ರೈತರಿಗೆ ಅನುಕೂಲವಾಗುತ್ತದೆ.

-ತಾಜು, ತಂಬಾಕು ಬೆಳೆಗಾರ

andolanait

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

1 hour ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

1 hour ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

5 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

5 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

6 hours ago