ಜಿಲ್ಲೆಗಳು

ಇಂದು ಸಾರ್ವಜನಿಕರಿಗೆ ಮುಕ್ತವಾದ ಕನಕಭವನ

ಮೂಲಭೂತ ಸೌಕರ್ಯಗಳಿಲ್ಲದೆ ನನೆಗುದಿಗೆ ಬಿದ್ದಿದ್ದ ೫ ಕೊಟಿ ರೂ.ವೆಚ್ಚದ ಭವನ

ವರದಿ: ಮಂಜು ಕೋಟೆ

ಎಚ್.ಡಿ.ಕೋಟೆ: ಪೈಪೋಟಿ, ಗೊಂದಲಗಳ ನಡುವೆ ೫ ಕೋಟಿ ರೂ. ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಕನಕ ಭವನವನ್ನು ಕನಕ ಜಯಂತಿಯಂದು ಸಾರ್ವಜನಿಕರ ಸೇವೆಗೆ ಸಿದ್ಧವಾಗಿದೆ.

ಪಟ್ಟಣದ ಹೃದಯ ಭಾಗದಲ್ಲಿರುವ ಗದ್ದಿಗೆ ಸರ್ಕಲ್ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದೊಂದಿಗೆ ಜಿಲ್ಲೆಯಲ್ಲೇ ಕೋಟ್ಯಂತರ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕನಕ ಭವನ ಕೊನೆಗೂ ಸಾರ್ವಜನಿಕರ ಸೇವೆಗೆ ಸಿದ್ಧಗೊಳಿಸುವಲ್ಲಿ ತಾಲ್ಲೂಕು ಕುರುಬರ ಸಮಾಜದ ಅಧ್ಯಕ್ಷ ಮೊಳೆಐೂರು ಆನಂದ್ ಮತ್ತು ಆಡಳಿತ ಮಂಡಳಿಯವರು ಮುಂದಾಗಿದ್ದಾರೆ.

೧೯೯೪ರಲ್ಲಿ ಸವಾಜದ ಅಧ್ಯಕ್ಷರಾಗಿದ್ದ ವಡ್ಡರಗುಡಿ ರಾಮಸ್ವಾಮಿಯವರು ಒಂದೂವರೆ ಎಕರೆ ಜಾಗವನ್ನು ಸಂಘದಿಂದ ಖರೀದಿಸಿದ್ದರು. ತದನಂತರ ೨೦೧೩ರಲ್ಲಿ ಅಧ್ಯಕ್ಷರಾಗಿದ್ದ ಶಿವಪ್ಪ ಕೋಟೆ, ಕಾರ್ಯದರ್ಶಿ ಕೊಡಸೀಗೆ ರಾಜೇಗೌಡರ ಆಡಳಿತ ಮಂಡಳಿಯ ಪರಿಶ್ರಮದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಅವಧಿಯಲ್ಲಿ ಅತಿ ಹೆಚ್ಚು ಅನುದಾನ ಪಡೆದು ೫ ಕೋಟಿ ರೂ. ವೆಚ್ಚದ ಹೈಟೆಕ್ ಸಮುದಾಯ ಭವನ ನಿರ್ಮಾ ಣವಾಗಿದೆ.

ಭವನ ಮತ್ತು ಅಧ್ಯಕ್ಷರ ವಿಚಾರಗಳಿಗೆ ಸಂಬಂಧಿಸಿದಂತೆ ಶಿವಪ್ಪ ಕೋಟೆ ಬಣ ಮತ್ತು ಮೊಳೆಯೂರು ಆನಂದ್ ಬಣಗಳ ನಡುವೆ ಮುಸುಕಿನ ಗುದ್ದಾಟ ಮತ್ತು ಪೈಪೋಟಿ ಏರ್ಪಟ್ಟಿದ್ದವು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕುರುಬರ ಸಮಾಜದ ಅಧ್ಯಕ್ಷ ಸುಬ್ರಹ್ಮಣ್ಯ, ಮರಿಗೌಡ, ಮಾಜಿ ಶಾಸಕ ಸೋಮಶೇಖರ್ ಸೇರಿದಂತೆ ಅನೇಕ ಮುಖಂಡರ ಸಮ್ಮುಖದಲ್ಲಿ ಅನೇಕ ಬಾರಿ ನಡೆದ ಸಭೆಯಲ್ಲಿ ಗೊಂದಲಗಳನ್ನೆಲ್ಲ ಬಗೆಹರಿಸಿ, ಎಲ್ಲರನ್ನೂ ಒಗ್ಗೂಡಿಸಿ ತಾಲ್ಲೂಕು ಅಧ್ಯಕ್ಷರನ್ನಾಗಿ ಆನಂದ್, ಜಿಲ್ಲಾ ಅಧ್ಯಕ್ಷರನ್ನಾಗಿ ಶಿವಪ್ಪ ಕೋಟೆ ಅವರನ್ನು ಆಯ್ಕೆ ಮಾಡಲಾಯಿತು.

ಭವನ ಉದ್ಘಾಟನೆಗೊಂಡಿದ್ದರೂ ಪೂರ್ಣ ಪ್ರಮಾಣದ ಸೌಲಭ್ಯಗಳಿಲ್ಲದ ಕಾರಣ ಸಮಾಜದ ಅಧ್ಯಕ್ಷ ಮೊಳೆಯೂರು ಆನಂದ್, ಚೆನ್ನೇಗೌಡ, ಶಿವಮಲ್ಲು , ಕುಮಾರೇಗೌಡ, ಪ್ರಕಾಶ್, ಕುವಾರ್, ಯತೀಶ್ ಕುಮಾರ್, ಗಿರೀಶ್, ಹಿರೇಗೌಡ , ಮರಳು ಬೀರೇಗೌಡ, ರಮೇಶ ಸೇರಿದಂತೆ ಆಡಳಿತ ಮಂಡಳಿ ಮತ್ತು ಮುಖಂಡರು ಒಗ್ಗೂಡಿ ಸುಮಾರು ೫೦ ಲಕ್ಷ ರೂ.ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಹಿನ್ನೆಲೆಯಲ್ಲಿ ಕನಕ ಜಯಂತಿಯಂದು ಸಾರ್ವಜನಿಕರ ಸೇವೆಗೆ ಕನಕಭವನ ಸಿದ್ಧಗೊಂಡಿದೆ. ಅತ್ಯುತ್ತಮ ಭವನ ನಿರ್ಮಾಣಗೊಂಡಿರುವುದರಿಂದ ಕ್ಷೇತ್ರದ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಂಘದವರು ಉತ್ತಮ ಕೆಲಸ ನಿರ್ವಹಿಸಿದಾಗ ಮಾತ್ರ ಕನಕ ಭವನಕ್ಕೆ ಮತ್ತು ಸಮಾಜಕ್ಕೆ ಗೌರವ ಸಿಕ್ಕಿದಂತಾಗಲಿದೆ.

 ಕಳೆದೆರಡು ವರ್ಷಗಳಿಂದ ಕನಕ ಭವನದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಸಾರ್ವಜನಿಕರ ಸೇವೆಗೆ ಅನಾನುಕೂಲವಾಗಿತ್ತು. ನಾನು ಅಧ್ಯಕ್ಷನಾದ ಮೇಲೆ ಎಲ್ಲರ ಸಹಕಾರ ಪಡೆದುಕೊಂಡು ಸುಮಾರು ೩೫ ಲಕ್ಷ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. -ಮೊಳೆಯೂರು ಆನಂದ್, ಅಧ್ಯಕ್ಷರು, ತಾಲ್ಲೂಕು ಕುರುಬ ಸವಾಜ

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

3 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

8 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

14 hours ago