ಜಿಲ್ಲೆಗಳು

ನಾಳೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಗಡ್ಕರಿ ವೈಮಾನಿಕ ಸಮೀಕ್ಷೆ

ಬೆಂಗಳೂರು: ಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆ.
ನಗರಕ್ಕೆ ಭೇಟಿ ನೀಡುತ್ತಿರುವ ಗಡ್ಕರಿ ಅವರು, ಎಕ್ಸ್ಪ್ರೆಸ್ ವೇ ವೈಮಾನಿಕ ವೀಕ್ಷಣೆ ಮಾಡಲಿದ್ದಾರೆ ರಾಮನಗರದ ಜೀಗನಹಳ್ಳಿ ಗ್ರಾಮದ ಬಳಿ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ. ಬಹುತೇಕ ಬಡಾವಣೆಗಳ ಕಾಮಗಾರಿ ಪೂರ್ಣಗೊಂಡಿದ್ದು, ವಿಧಾನಸಭೆ ಚುನಾವಣೆಗೂ ಮುನ್ನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
4,473 ಕೋಟಿ ರೂ. ವೆಚ್ಚದಲ್ಲಿ 118 ಕಿ.ಮೀ. ಉದ್ದದ ವಿನ್ಯಾಸದ ಪ್ರವೇಶ ನಿಯಂತ್ರಿತ ಹೆದ್ದಾರಿಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದು ಬೆಂಗಳೂರು ಮತ್ತು ಮೈಸೂರು ನಡುವಿನ ಪ್ರಸ್ತುತ ಪ್ರಯಾಣದ ಮೂರು ಗಂಟೆಗಳ ಸಮಯವನ್ನು90 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ. ಪ್ರಯಾಣದ ಸಮಯ, ಇಂಧನ ಮತ್ತು ಪರಿಸರವನ್ನು ಉಳಿಸುವುದರ ಜೊತೆಗೆ, ಇದು ಪ್ರವಾಸೋದ್ಯಮ ಮತ್ತು ಆರ್ಥಿಕತೆಯನ್ನು ಉತ್ತೇಜಿಸುತ್ತದೆ.
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ 262 ಕಿ.ಮೀ. ಒಳಗೊಂಡಿದ್ದು, ಬೆಂಗಳೂರು ಹೊರ ವರ್ತುಲ ರಸ್ತೆಯನ್ನು ಚೆನ್ನೈ ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುತ್ತದೆ. ಲಾಜಿಸ್ಟಿಕ್ ದಕ್ಷತೆಯನ್ನು ಹೆಚ್ಚಿಸುತ್ತಿದೆ. 14,872 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಮೂಲಕ ಈ ರಸ್ತೆ ಹಾದುಹೋಗುತ್ತದೆ.

andolanait

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

5 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

26 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

1 hour ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago