Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

ನಾಳೆ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನ

ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ  ಸಮ್ಮುಖ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ ಭಾಗವಹಿಸುವರು. ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು. ಖ್ಯಾತ ಗಾಯಕ ಅಮ್ಮ ರಾಮಚಂದ್ರ ತಂಡದಿಂದ ಗೀತಾಗಾಯನ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!