Mysore
32
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ನಾಳೆ ಜಿ.ಬಿ.ಸರಗೂರಿನಲ್ಲಿ ಕನ್ನಡ ರಾಜ್ಯೋತ್ಸವ

ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.

ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ, ಜಾ.ದಳ ಮುಖಂಡರಾದ ಕೆ.ಎಂ. ಕೃಷ್ಣನಾಯಕ, ಜಯಪ್ರಕಾಶ್ ಚಿಕ್ಕಣ್ಣ, ಬಿಜೆಪಿ ಮುಖಂಡರಾದ ಅಪ್ಪಣ್ಣ, ಎಚ್.ಪಿ. ಕೃಷ್ಣಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ೬.೩೦ಕ್ಕೆ ಗ್ರಾಮದ ಅರಳಿಕಟ್ಟೆ ಆವರಣದಲ್ಲಿ ಪ್ರಕೃತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ‘ಅಪ್ಪು ನೆನಪುಗಳು’ ಎಂಬ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಗಾರೆ ಕೆಲಸಗಾರರ ಯುವಕರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಕಾಶಿ ವಿಶ್ವನಾಥ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!