ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ.
ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ ಚಿಕ್ಕಣ್ಣ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ, ಜಾ.ದಳ ಮುಖಂಡರಾದ ಕೆ.ಎಂ. ಕೃಷ್ಣನಾಯಕ, ಜಯಪ್ರಕಾಶ್ ಚಿಕ್ಕಣ್ಣ, ಬಿಜೆಪಿ ಮುಖಂಡರಾದ ಅಪ್ಪಣ್ಣ, ಎಚ್.ಪಿ. ಕೃಷ್ಣಸ್ವಾಮಿ ಅವರು ಪಾಲ್ಗೊಳ್ಳಲಿದ್ದಾರೆ. ಸಂಜೆ ೬.೩೦ಕ್ಕೆ ಗ್ರಾಮದ ಅರಳಿಕಟ್ಟೆ ಆವರಣದಲ್ಲಿ ಪ್ರಕೃತಿ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ‘ಅಪ್ಪು ನೆನಪುಗಳು’ ಎಂಬ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಕೆಂಪೇಗೌಡ ಗಾರೆ ಕೆಲಸಗಾರರ ಯುವಕರ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ, ಕಾಶಿ ವಿಶ್ವನಾಥ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…