ಜಿಲ್ಲೆಗಳು

ಚಾ.ನಗರ : ನ.5 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.ನಾಳೆ ಆರೋಗ್ಯ ಉಚಿತ ತಪಾಸಣಾ ಶಿಬಿರ

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಸಿದ್ದಮಲ್ಲೇಶ್ವರ ವಿರಕ್ತ ಮಠದ ಬಸವರಾಜಸ್ವಾಮಿ ಅನುಭವ ಮಂಟಪದಲ್ಲಿ ಅಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿಬಿರದಲ್ಲಿ ಕಣ್ಣಿನ ತಪಾಸಣೆ ಮತ್ತು ಕನ್ನಡಕ ವಿತರಣೆ, ಬಿ.ಪಿ ಮತ್ತು ಶುಗರ್ ಪರೀಕ್ಷೆ ಮತ್ತು ಸಲಹೆ, ಶ್ವಾಸಕೋಶ ಪರೀಕ್ಷೆ, ಮಹಿಳೆಯರ ಗರ್ಭಕೋಶದ ಪರೀಕ್ಷೆ, ವಾಕ್ ಮತ್ತು ಶ್ರವಣ ತಪಾಸಣೆ, ಕಿವಿ, ಮೂಗು, ಗಂಟಲು ಪರೀಕ್ಷೆ, ಹೃದಯ ರೋಗ ತಪಾಸಣೆ, ಮಹಿಳೆಯರ ಸ್ತನ ಕ್ಯಾನ್ಸರ್ ಪರೀಕ್ಷೆ ಸೇರಿದಂತೆ ಇತರ ಆರೋಗ್ಯಗಳ ತಪಾಸಣೆ ಮಾಡಲಾಗುತ್ತದೆ. ಜಿಲ್ಲೆಯ ಜನತೆ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.
ಗೋಷ್ಠಿಯಲ್ಲಿ ಜ್ಯೋತಿ, ಬಸವಣ್ಣ, ಮಲ್ಲೇಶ್, ನಂದೀಶ್, ಚಿಕ್ಕಸ್ವಾಮಿ, ಶಿವರುದ್ರಸ್ವಾಮಿ ಹಾಜರಿದ್ದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

17 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

22 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

26 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago