ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ ಹಾಕಿ ಕೋರ್ಟಿನ ಮೆಟ್ಟಿಲೇರಿದ್ದರು ತಾನು ಕಟ್ಟಿದ್ದ ಮುಂಗಡ ಹಣ ಟ್ಯಾಕ್ಟರ್ ಎಲ್ಲವನ್ನು ಕಳೆದುಕೊಂಡು ಈಗ ಚೆಕ್ ಬೌನ್ಸ್ ಕೇಸ್ನಲ್ಲಿ ಆರೋಪಿಯಾಗಿ ನಿಂತು ಅವಮಾನ ಅನುಭವಿಸಿದ ಕಾರಣದಿಂದ ಸೋಮವಾರ ಸಂಜೆ ರೈತ ಕೃಷ್ಣ ವಿಷ ಸೇವಿಸಿದ್ದಾರೆ ನಂತರ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ ಅದರೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಖಾಸಗಿ ಪೈನಾನ್ಸ್ ಕಾರಣ ಎಂದು ಜಿಲ್ಲಾ ರೈತಸಂಘ ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಮೃತ ರೈತ ಕೃಷ್ಣ ಎಂಬುವವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದು ಅತ್ಮಹತ್ಯೆಯ ವಿಚಾರದಿಂದ ಮನನೊಂದಿದ್ದಾರೆ.
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…