ಜಿಲ್ಲೆಗಳು

ಸಾಂಪ್ರದಾಯಿಕ ಆತ್ಮರಕ್ಷಣಾ ಕಲೆ ಉಳಿಸಬೇಕು : ಈಶ್ವರ ಖಂಡ್ರೆ

ಸುತ್ತೂರು : ಕುಸ್ತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಈ ಸಾಂಪ್ರಾದಾಯಿಕ ಆತ್ಮರಕ್ಷಣಾ ಕಲೆಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಕುಸ್ತಿ ಪಟುಗಳ ಬೆನ್ನುತಟ್ಟಿ ಸಾಂಪ್ರದಾಯಿಕ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಿದ ಅವರು ಕುಸ್ತಿಗೆ ಭಾರತದಲ್ಲಿ ಭವ್ಯ ಇತಿಹಾಸವಿದ್ದು, ನಮ್ಮ ದೇಶೀ ಕ್ರೀಡೆಗಳಾದ ಕಬಡ್ಡಿ, ಕುಸ್ತಿ, ನಂದಿಕಂಬ ಇತ್ಯಾದಿ ಇಂದು ಮರೆಯಾಗುತ್ತಿದೆ. ಇದನ್ನು ಮತ್ತೆ ಜನಪ್ರಿಯಗೊಳಿಸಬೇಕಿದೆ ಎಂದರು.

ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಕುಸ್ತಿ, ಗರಡಿ ಮನೆಯಲ್ಲಿನ ಕಸರತ್ತು ನಮ್ಮ ಆರೋಗ್ಯವನ್ನು ಸದೃಢವಾಗಿಡುತ್ತದೆ. ಹಿಂದೆ ಪ್ರತಿ ಗ್ರಾಮದಲ್ಲಿ ವ್ಯಾಯಾಮ ಶಾಲೆ ಇರುತ್ತಿತ್ತು, ಯುವಕರು ಕಸರತ್ತು ಮಾಡುತ್ತಿದ್ದರು. ಇಂದಿನ ಮಕ್ಕಳು ಮೊಬೈಲ್ ನಲ್ಲಿ ಕಳೆದು ಹೋಗುತ್ತಿದ್ದಾರೆ. ಪ್ರತಿಯೊಂದು ಮಗುವಿಗೂ ದೈಹಿಕ ಆರೋಗ್ಯದ ಮಹತ್ವ ತಿಳಿಸಬೇಕು ಎಂದರು.

ಎಲ್ಲರೂ ನಿಯಮಿತವಾಗಿ ಯೋಗ, ವ್ಯಾಯಾಮ, ವಾಯು ವಿಹಾರ ಇತ್ಯಾದಿ ಉತ್ತಮ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ತಿಳಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು.

ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶಾಸಕರಾದ ಗಣೇಶ್ ಪ್ರಸಾದ್, ದೇವೇಂದ್ರಪ್ಪ ಮತ್ತು ಮಾಜಿ ಶಾಸಕ ಡಾ. ಯತೀಂದ್ರ ಮತ್ತಿತರರು ಭಾಗಿಯಾಗಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago