ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ ಮಾಡುವ ಮೂಲಕ ಒಂದೂವರೆ ತಿಂಗಳ ಬಳಿಕ ಹುದ್ದೆ ತೋರಿಸಿದೆ. ಎಂ.ಎಸ್.ಗೀತಾ ಅವರ ಸ್ಥಳಕ್ಕೆ ಯಾರನ್ನೂ ನಿಯೋಜಿಸಿಲ್ಲ. ನಾಗರಿಕಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಆಗಿದ್ದ ಎಂ.ಎಸ್.ಗೀತಾ ಅವರನ್ನು ೨೦೨೦ ಜೂನ್ ೨ರಂದು ಸರ್ಕಾರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯನ್ನಾಗಿ ನೇಮಿಸಲಾಗಿತ್ತು. ಜೂ.೪ರಂದು ಅಧಿಕಾರ ಸ್ವೀಕರಿಸಿದ್ದರು. ಕಳೆದ ಮೂರು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆಯಲ್ಲಿ ರದ್ದಾಗಿತ್ತು. ಇದೀಗ ಸಾರ್ವತ್ರಿಕ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…