ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ ಮಾಡುವ ಮೂಲಕ ಒಂದೂವರೆ ತಿಂಗಳ ಬಳಿಕ ಹುದ್ದೆ ತೋರಿಸಿದೆ. ಎಂ.ಎಸ್.ಗೀತಾ ಅವರ ಸ್ಥಳಕ್ಕೆ ಯಾರನ್ನೂ ನಿಯೋಜಿಸಿಲ್ಲ. ನಾಗರಿಕಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಆಗಿದ್ದ ಎಂ.ಎಸ್.ಗೀತಾ ಅವರನ್ನು ೨೦೨೦ ಜೂನ್ ೨ರಂದು ಸರ್ಕಾರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯನ್ನಾಗಿ ನೇಮಿಸಲಾಗಿತ್ತು. ಜೂ.೪ರಂದು ಅಧಿಕಾರ ಸ್ವೀಕರಿಸಿದ್ದರು. ಕಳೆದ ಮೂರು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆಯಲ್ಲಿ ರದ್ದಾಗಿತ್ತು. ಇದೀಗ ಸಾರ್ವತ್ರಿಕ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…