ಜಿಲ್ಲೆಗಳು

ಡಿಸಿಪಿ ಎಂ.ಎಸ್.ಗೀತಾ ಪ್ರಸನ್ನ ವರ್ಗಾವಣೆ

ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ ಮಾಡುವ ಮೂಲಕ ಒಂದೂವರೆ ತಿಂಗಳ ಬಳಿಕ ಹುದ್ದೆ ತೋರಿಸಿದೆ. ಎಂ.ಎಸ್.ಗೀತಾ ಅವರ ಸ್ಥಳಕ್ಕೆ ಯಾರನ್ನೂ ನಿಯೋಜಿಸಿಲ್ಲ. ನಾಗರಿಕಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಆಗಿದ್ದ ಎಂ.ಎಸ್.ಗೀತಾ ಅವರನ್ನು ೨೦೨೦ ಜೂನ್ ೨ರಂದು ಸರ್ಕಾರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯನ್ನಾಗಿ ನೇಮಿಸಲಾಗಿತ್ತು. ಜೂ.೪ರಂದು ಅಧಿಕಾರ ಸ್ವೀಕರಿಸಿದ್ದರು. ಕಳೆದ ಮೂರು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಲಾಗುತ್ತಿದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆಯಲ್ಲಿ ರದ್ದಾಗಿತ್ತು. ಇದೀಗ ಸಾರ್ವತ್ರಿಕ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

3 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

5 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

13 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

15 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

17 hours ago