ಜಿಲ್ಲೆಗಳು

ಗ್ರಾಮಗಳಿಗೆ ಸಿಗದ ಸಾರಿಗೆ ಸೌಲಭ್ಯ : ಡೋಲಿ ಮೂಲಕ ರೋಗಿ ಆಸ್ಪತ್ರೆಗೆ ದಾಖಲು

ಹನೂರು : ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಡೋಲಿ ಮೂಲಕ ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಜರುಗಿದೆ.

ತಾಲೂಕಿನ ದೊಡ್ಡಾಣಿ ಗ್ರಾಮದ ಮಹದೇವ್( 62) ವರ್ಷದ ರವರಿಗೆ ಕಳೆದ ಆರು ತಿಂಗಳಿನಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರು. ಇವರನ್ನು ಪ್ರತಿ ಬಾರಿಯೂ ಡೋಲಿ ಮುಖಾಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಗುರುವಾರ ಮಧ್ಯಾಹ್ನ ತೀವ್ರ ಅಸ್ವಸ್ಥರಾದ ಕಾರಣ ಡೋಲಿಯಲ್ಲಿಯೇ ಸುಳ್ವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಸ್ವಾತಂತ್ರ್ಯ ಬಂದು 75 ವರ್ಷಗಳೆ ಕಳೆದರು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಸಾರಿಗೆ ವ್ಯವಸ್ಥೆ ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪ್ರಾಧಿಕಾರದವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಈ ಕಾಡಂಚಿನ ಗ್ರಾಮಗಳ ರಸ್ತೆ ತಲೆಗೆಟ್ಟಿರುವುದರಿಂದ 108 ತುರ್ತು ವಾಹನ ತೆರಳಲು ಸಾಧ್ಯವಾಗುತ್ತಿಲ್ಲ ಇದರಿಂದ ಇಲ್ಲಿಯ ರೋಗಿಗಳು ನರಕ ಅನುಭವಿಸುವಂತಾಗಿದೆ. ಗರ್ಭಿಣಿಯರನ್ನು ಆಸ್ಪತ್ರೆಗೆ ಡೋಲಿಯಲ್ಲಿ ಕರೆ ತರುವ ವೇಳೆ ಮಾರ್ಗ ಮಧ್ಯದಲ್ಲಿಯೇ ಹೆರಿಗೆಯೂ ಆಗಿದೆ. ಕೆಲವರು ಮಾರ್ಗ ಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಇಷ್ಟಾದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೊಡ್ಡಣೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಆಶ್ರಯವಾಗಿದ್ದ ಜನವನ : ಈ ಹಿಂದೆ ಮೆಂದಾರೆ,ತುಳಸಿಕೆರೆ, ಇಂಡಿಗನತ್ತ, ಪಡಸಲನತ್ತ, ಮೆದಗನಾಣೆ, ಪಾಲಾರ್, ದೊಡ್ಡಣೆ, ತೊಕೆರೆ, ಕೊಕ್ಕಬರೆ ಗ್ರಾಮಗಳಿಗೆ 3 ಜನ ವನ ವಾಹನ ಬಿಡಲಾಗಿತ್ತು. ಇದೀಗ ಕಳೆದ ಎರಡು ತಿಂಗಳಿನಿಂದ ರಸ್ತೆ ಹದಗೆಟ್ಟಿರುವುದರಿಂದ ಹಾಗೂ ಚಾಲಕರಿಗೆ ಸಂಬಳ ನೀಡದೆ ಇರುವುದರಿಂದ ವಾಹನ ನಿಲುಗಡೆಯಾಗಿದೆ. ಇಂಡಿಗನತ್ತ ಗ್ರಾಮದ ರಸ್ತೆಯನ್ನು ದುರಸ್ತಿ ಪಡಿಸಲಾಗುತ್ತಿದೆ ಅರಣ್ಯ ಇಲಾಖೆಯವರು ಚಾಲಕನನ್ನು ನೇಮಕ ಮಾಡಿದರೆ ಈ ಮಾರ್ಗವಾಗಿ ಜನಮನ ವಾಹನ ಪ್ರಾರಂಭ ಮಾಡುತ್ತೇವೆ ಎಂದು ಇಡಿಸಿ ಅಧ್ಯಕ್ಷ ತೊಳಸಿಕೆರೆ ಕೆಂಪ್ಪಣ್ಣ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.


ಹಿಂದಿನ ಡಿ ಎಫ್ಒ ರವರು ಕಾಡಂಚಿನ ಗ್ರಾಮಗಳ ಜನರ ಅನುಕೂಲಕ್ಕಾಗಿ ಜನವನ ವಾಹನವನ್ನು ಬಿಟ್ಟಿದ್ದರು. ಇದೀಗ ಅರಣ್ಯ ಇಲಾಖೆಯವರು ಜನವನ ವಾಹನವನ್ನು ನಿಲ್ಲಿಸಿರುವುದರಿಂದ ತೀವ್ರ ತೊಂದರೆ ಆಗಿದೆ. ಜನಪ್ರತಿನಿಧಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ, ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ವಹಿಸಬೇಕು.

ಕುಮಾರ್
ಮಹಾದೇವರ ಮಗ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

1 hour ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

2 hours ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

14 hours ago