ಮೈಸೂರು: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸೆರೆ ಹಿಡಿಯಲಾದ ಎರಡು ಹೆಣ್ಣು ಹುಲಿಗಳಿಗೆ ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೃಗಾಲಯದ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದಾರೆ.
ನಾಗರಹೊಳೆಯ ಅಂತರಸಂತೆ ವಲಯದಲಿ ಸೆರೆ ಹಿಡಿದ 9ವರ್ಷದ ಹೆಣ್ಣು ಹುಲಿ, ನಾಣಚ್ಚಿ ಬಳಿ ಸೆರೆ ಹಿಡಿದ 12ವರ್ಷದ ಹೆಣ್ಣು ಹುಲಿಗೆ ಸೆರೆ ಹಿಡಿಯುವ ವೇಳೆ ಹೆಚ್ಚು ಗಾಯವಾದ ಹಿನ್ನೆಲೆಯಲ್ಲಿ ಮೃಗಾಲಯದ ಪಶುವೈದ್ಯರು ಚಿಕಿತ್ಸೆ ನೀಡಿದ್ದಾರೆ. ಹಾಗೆಯೇ, ಟಿ. ನರಸೀಪುರ ಬಳಿ ಬೋನಿಗೆ ಬಿದ್ದ ಚಿರತೆ ಆರೋಗ್ಯವನ್ನು ತಪಾಸಣೆ ಮಾಡಿ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಮೈಸೂರು ಮೃಗಾಲಯದಲ್ಲಿ ಸ್ಥಳ ಕಡಿಮೆ ಇರುವುದರಿಂದ ಸೆರೆ ಸಿಕ್ಕ ಎರಡು ಹೆಣ್ಣು ಹುಲಿಗಳಲ್ಲಿ ಒಂದು ಹುಲಿಯನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡಲಾಗುವುದು. ಒಂದು ಹುಲಿಯನ್ನು ಮೈಸೂರು ಮೃಗಾಲಯದಲ್ಲಿ ಉಳಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ತಿಳಿಸಿದರು.
ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ್ ಅವರು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಹುಲಿಗಳಿಗೆ ಚಿಕಿತ್ಸೆ ನೀಡುವುದನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…