ಜಿಲ್ಲೆಗಳು

ಕಾಡಂಚಿನ ಸರ್ಕಾರಿ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ ಭೇಟಿ & ಪರಿಶೀಲನೆ

ಹನೂರು : ಕಾಡಂಚಿನ ಸರ್ಕಾರಿ ಶಾಲೆಗಳಿಗೆ ಅಪರ  ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಬುಧವಾರ  ಭೇಟಿ ನೀಡಿ ಪರಿಶೀಲನೆ ನಡೆಸಿದರು..

ತಾಲೂಕಿನ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಹಳೆಯೂರು, ಗೊರಸಾಣೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿಕ್ಷಕಿಯಾದ ಅಪರ  ಜಿಲ್ಲಾಧಿಕಾರಿ : ಹಳೆಯೂರು ಶಾಲೆಗೆ ಭೇಟಿ ನೀಡಿದ ಕಾತ್ಯಾಯಿನಿ ದೇವಿ ಯವರು ಮಕ್ಕಳಿಗೆ ಕೆಲವು ಕನ್ನಡ ಇಂಗ್ಲೀಷ್ ಪದಗಳನ್ನು ಕಪ್ಪು ಹಲಗೆಯ ಮೇಲೆ ಬರೆದು ಕೇಳಿದರು ಜೊತೆಗೆ ಮಗ್ಗಿ ಕೇಳಿ ಮಕ್ಕಳ ಉತ್ತರ ನೋಡಿ ಖುಷಿ ಪಟ್ಟರು.ಅಲ್ಲದೇ ಇಂಗ್ಲೀಷ್ ಕಲಿಕೆಗೆ ಹೆಚ್ಚು ಒತ್ತನ್ನು ನೀಡಬೇಕು ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಬೇಕು ಎಂದರು.

ಪ್ರಾಧಿಕಾರದ ವತಿಯಿಂದ ಶಾಲೆಗಳ ಅಭಿವೃದ್ಧಿ : ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಗೊರಸಾಣೆ, ಹಳೇಯೂರು, ಕೊಂಬುಡಿಕ್ಕಿ ಈಗೆ ಕೆಲವು ಆಯ್ದ ಶಾಲೆಗಳಿಗೆ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಮಾಡಲು ಕ್ರಮ ಕೈಗೊಂಡಿದ್ದು ಮುಂದಿನ ದಿನಗಳಲ್ಲಿ ಕಾರ್ಯ ರೂಪಾಕ್ಕೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಅಡುಗೆ ಮನೆ ಪರಿಶೀಲನೆ : ಮಧ್ಯಾಹ್ನದ ಬಿಸಿಯೂಟ ತಯಾರು ಮಾಡುವ ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡಿಸಿ ಅಲ್ಲಿನ ಶಿಸ್ತು ಕಂಡು ಈಗೆ ಮುಂದುವರೆಸುವಂತೆ  ತಿಳಿಸಿದ್ದಾರೆ.

ಇದೆ ವೇಳೆ ಹಳೆಯೂರು ಶಾಲೆಯ ಮುಖ್ಯ   ಶಿಕ್ಷಕ ಮಹೇಂದ್ರ ತಮ್ಮ ಶಾಲೆಗೆ ಬೇಕಾದ ಅಗತ್ಯ ಸೌಕರ್ಯ ಮಾಡಿಕೊಡುವಂತೆ ಮನವಿ ಮಾಡಿದ್ದು ಇದಕ್ಕೆ ಸಕರಾತ್ಮಕವಾಗಿ  ಅಧಿಕಾರಿಗಳು  ಸ್ಪಂದಿಸಿದ್ದಾರೆ. ಅಲ್ಲದೇ ಪ್ರಾಧಿಕಾರ ರಚನೆಯಾದ ದಿನಗಳಿಂದಲೂ ಸಹ ಯಾವ ಕಾರ್ಯದರ್ಶಿಯೂ ಶಾಲೆಗೆ ಭೇಟಿ ನೀಡಿಲ್ಲ ಆದರೇ ಈ  ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿದ್ದು ವಿಶೇಷವಾಗಿತ್ತು.

ಇದೆ ಸಂದರ್ಭದಲ್ಲಿ ಪ್ರಾಧಿಕಾರದ ಲೆಕ್ಕ ಪರಿಶೋಧಕ ಪ್ರವೀಣ್ ಪಾಟೀಲ್,ಗ್ರಾಮದ ಮುಖಂಡ ಮಾದಯ್ಯಾ, ಮುಖ್ಯ ಶಿಕ್ಷಕ ಪ್ರಕಾಶ್, ಮಹೇಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

1 hour ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago