ಜಿಲ್ಲೆಗಳು

ಮೊದಲು ಗಿರಿಜನರ ಪೋಡುಗಳಿಗೆ ಸೌಲಭ್ಯ ಕಲ್ಪಿಸಿ :ಶಾಸಕ ಆರ್.ನರೇಂದ್ರ ಆಗ್ರಹ

 ಹುಲಿ ಯೋಜನೆ ಅನುಷ್ಠಾನ ಬೇಡವೇ ಬೇಡ

ಬಿರ್ಸಾ ಮುಂಡಾ ಜಯಂತಿಯಲ್ಲಿ ನರೇಂದ್ರ ಆಗ್ರಹ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಯೋಜನೆ ಪ್ರದೇಶವಾಗಿ ಘೋಷಿಸುವ ಮೊದಲು ವನ್ಯಜೀವಿಧಾಮದ ಒಳಗಿರುವ ಗಿರಿಜನರ ಪೋಡುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಆರ್.ನರೇಂದ್ರ ಅವರು ಒತ್ತಾಯಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಬಿರ್ಸಾಮುಂಡಾರ ೧೪೮ನೇ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ನಾನು ೫-೬ ವರ್ಷಗಳಿಂದ ಹುಲಿ ಯೋಜನೆ ಜಾರಿಯನ್ನು ವಿರೋಧಿಸುತ್ತ ಬಂದಿದ್ದೇನೆ. ವನ್ಯಜೀವಿಧಾಮದಲ್ಲಿ ೫೬ ಆದಿವಾಸಿ ಪೋಡುಗಳಿದ್ದು ೧೫ ಸಾವಿರ ಗಿರಿಜನರು ವಾಸವಾಗಿದ್ದಾರೆ. ಪೋಡುಗಳಿಗೆ ಇನ್ನು ಸರಿಯಾಗಿ ಮೂಲ ಸೌಕರ್ಯ ಕಲ್ಪಿಸಿಲ್ಲ. ೪ ಪೋಡುಗಳಿಗೆ ಇನ್ನು ವಿದ್ಯುತ್ ಸೌಲಭ್ಯ ದೊರಕಿಲ್ಲ ಎಂದು ತಿಳಿಸಿದರು.
ವನ್ಯಜೀವಿಧಾಮದಲ್ಲಿ ೧೨-೧೩ ಹುಲಿಗಳಿರಬಹುದು. ಅವುಗಳ ರಕ್ಷಣೆಗಾಗಿ ೧೫ ಸಾವಿರ ಗಿರಿಜನರ ಬದುಕನ್ನು ನರಕ ಮಾಡುವುದು ಬೇಡ. ಒಂದು ವೇಳೆ ಹುಲಿ ಯೋಜನೆ ಜಾರಿಯಾದರೆ ಪೋಡುಗಳಿಗೆ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ ಸಿಗುವುದಿಲ್ಲ. ಅರಣ್ಯಾಧಿಕಾರಿಗಳು ಪ್ರತಿಯೊಂದಕ್ಕೂ ತಕರಾರು ಮಾಡುತ್ತಾರೆ ಎಂದು ತಿಳಿಸಿದರು.
ಬಂಡೀಪುರ ಮತ್ತು ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ಪ್ರದೇಶಗಳಾಗಿವೆ. ಸಂಜೆ ೬ ಗಂಟೆ ನಂತರ ಪ್ರವೇಶ ನಿಷೇಧಿಸಲಾಗಿದೆ. ಹಾಗೆಯೇ ಇಲ್ಲಿಯೂ ಆಗಲಿದ್ದು ಮಲೆ ಮಹದೇಶ್ವರ ಭಕ್ತರು, ಗಿರಿಜನರಿಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಿದರು.
ಹುಲಿ ಯೋಜನೆಯಿಂದ ಯಾವುದೇ ತೊಂದರೆಯಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೇಳುತ್ತಾರೆ. ಈ ಬಗ್ಗೆ ನಮಗೆ ಲಿಖಿತವಾಗಿ ನೀಡಬೇಕು ಎಂದರೆ ಉತ್ತರವಿಲ್ಲ. ಹನೂರು ಕ್ಷೇತ್ರ ವ್ಯಾಪ್ತಿಯ ೮೨ ಪೋಡುಗಳ ೧೭೮೦ ಗಿರಿಜನರಿಗೆ ಭೂಮಿ ಹಕ್ಕು ಪತ್ರ ಕೊಡಿಸಿದ್ದೇನೆ ಎಂದರು.
ಉದ್ಘಾಟನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ದಲಿತ, ಹಿಂದುಳಿದ ಜನಾಂಗಗಳ ಕಲ್ಯಾಣಕ್ಕೆ ಅಭಿವೃದ್ಧಿ ನಿಗಮಗಳನ್ನು ಪ್ರಾರಂಭಿಸಲಾಗಿದೆ. ಹಾಗೆಯೇ ಆದಿವಾಸಿ ಅಭಿವೃದ್ಧಿ ನಿಗಮ ಆರಂಭಿಸಬೇಕು ಎಂದು ಆಗ್ರಹಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರು ಮಾತನಾಡಿ, ಗಿರಿಜನರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

andolanait

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

6 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

8 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

10 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

12 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

19 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

23 mins ago