ಜಿಲ್ಲೆಗಳು

ಮೊದಲು ಗಿರಿಜನರ ಪೋಡುಗಳಿಗೆ ಸೌಲಭ್ಯ ಕಲ್ಪಿಸಿ :ಶಾಸಕ ಆರ್.ನರೇಂದ್ರ ಆಗ್ರಹ

 ಹುಲಿ ಯೋಜನೆ ಅನುಷ್ಠಾನ ಬೇಡವೇ ಬೇಡ

ಬಿರ್ಸಾ ಮುಂಡಾ ಜಯಂತಿಯಲ್ಲಿ ನರೇಂದ್ರ ಆಗ್ರಹ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮವನ್ನು ಹುಲಿ ಯೋಜನೆ ಪ್ರದೇಶವಾಗಿ ಘೋಷಿಸುವ ಮೊದಲು ವನ್ಯಜೀವಿಧಾಮದ ಒಳಗಿರುವ ಗಿರಿಜನರ ಪೋಡುಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಆರ್.ನರೇಂದ್ರ ಅವರು ಒತ್ತಾಯಿಸಿದರು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಬಿರ್ಸಾಮುಂಡಾರ ೧೪೮ನೇ ಜಯಂತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.
ನಾನು ೫-೬ ವರ್ಷಗಳಿಂದ ಹುಲಿ ಯೋಜನೆ ಜಾರಿಯನ್ನು ವಿರೋಧಿಸುತ್ತ ಬಂದಿದ್ದೇನೆ. ವನ್ಯಜೀವಿಧಾಮದಲ್ಲಿ ೫೬ ಆದಿವಾಸಿ ಪೋಡುಗಳಿದ್ದು ೧೫ ಸಾವಿರ ಗಿರಿಜನರು ವಾಸವಾಗಿದ್ದಾರೆ. ಪೋಡುಗಳಿಗೆ ಇನ್ನು ಸರಿಯಾಗಿ ಮೂಲ ಸೌಕರ್ಯ ಕಲ್ಪಿಸಿಲ್ಲ. ೪ ಪೋಡುಗಳಿಗೆ ಇನ್ನು ವಿದ್ಯುತ್ ಸೌಲಭ್ಯ ದೊರಕಿಲ್ಲ ಎಂದು ತಿಳಿಸಿದರು.
ವನ್ಯಜೀವಿಧಾಮದಲ್ಲಿ ೧೨-೧೩ ಹುಲಿಗಳಿರಬಹುದು. ಅವುಗಳ ರಕ್ಷಣೆಗಾಗಿ ೧೫ ಸಾವಿರ ಗಿರಿಜನರ ಬದುಕನ್ನು ನರಕ ಮಾಡುವುದು ಬೇಡ. ಒಂದು ವೇಳೆ ಹುಲಿ ಯೋಜನೆ ಜಾರಿಯಾದರೆ ಪೋಡುಗಳಿಗೆ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ ಸಿಗುವುದಿಲ್ಲ. ಅರಣ್ಯಾಧಿಕಾರಿಗಳು ಪ್ರತಿಯೊಂದಕ್ಕೂ ತಕರಾರು ಮಾಡುತ್ತಾರೆ ಎಂದು ತಿಳಿಸಿದರು.
ಬಂಡೀಪುರ ಮತ್ತು ಬಿಳಿಗಿರಿರಂಗನಬೆಟ್ಟ ಹುಲಿ ಯೋಜನೆ ಪ್ರದೇಶಗಳಾಗಿವೆ. ಸಂಜೆ ೬ ಗಂಟೆ ನಂತರ ಪ್ರವೇಶ ನಿಷೇಧಿಸಲಾಗಿದೆ. ಹಾಗೆಯೇ ಇಲ್ಲಿಯೂ ಆಗಲಿದ್ದು ಮಲೆ ಮಹದೇಶ್ವರ ಭಕ್ತರು, ಗಿರಿಜನರಿಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಿದರು.
ಹುಲಿ ಯೋಜನೆಯಿಂದ ಯಾವುದೇ ತೊಂದರೆಯಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೇಳುತ್ತಾರೆ. ಈ ಬಗ್ಗೆ ನಮಗೆ ಲಿಖಿತವಾಗಿ ನೀಡಬೇಕು ಎಂದರೆ ಉತ್ತರವಿಲ್ಲ. ಹನೂರು ಕ್ಷೇತ್ರ ವ್ಯಾಪ್ತಿಯ ೮೨ ಪೋಡುಗಳ ೧೭೮೦ ಗಿರಿಜನರಿಗೆ ಭೂಮಿ ಹಕ್ಕು ಪತ್ರ ಕೊಡಿಸಿದ್ದೇನೆ ಎಂದರು.
ಉದ್ಘಾಟನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ದಲಿತ, ಹಿಂದುಳಿದ ಜನಾಂಗಗಳ ಕಲ್ಯಾಣಕ್ಕೆ ಅಭಿವೃದ್ಧಿ ನಿಗಮಗಳನ್ನು ಪ್ರಾರಂಭಿಸಲಾಗಿದೆ. ಹಾಗೆಯೇ ಆದಿವಾಸಿ ಅಭಿವೃದ್ಧಿ ನಿಗಮ ಆರಂಭಿಸಬೇಕು ಎಂದು ಆಗ್ರಹಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರು ಮಾತನಾಡಿ, ಗಿರಿಜನರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

50 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago