ಜಿಲ್ಲೆಗಳು

ನೈಋತ್ಯ ರೈಲ್ವೆ ನೌಕರರು ಹಾಗೂ ಸಿಬ್ಬಂದಿಗಳಿಗೆ ಸನ್ಮಾನ

ಮೈಸೂರು : ನಗರದ ಯಾದವಗಿರಿಯ ಚಾಮುಂಡಿ ಆಫೀಸರ್ಸ್ ಕ್ಲಬ್ ನಲ್ಲಿಇಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಮಹಿಳಾ ಕಲ್ಯಾಣ ಸಮಿತಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣಾ  ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೌಕರರ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ನೀಡಲು ಹಾಗೂ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಹೆಸರು ಸಂಪಾದಿಸಿದ, ವಿವಿಧ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿ ಭಾಗವಹಿಸಿದ ನೌಕರರನ್ನು ಮತ್ತು ಹಲವಾರು ವಿಭಾಗಗಳಲ್ಲಿ ತಮ್ಮ ಜವಾಬ್ದಾರಿಯುತ ಕಾರ್ಯ ಹಾಗು ಕ್ಷಮತೆಯಿಂದ ವಿಭಾಗದ ಘನತೆಯನ್ನು ಎತ್ತಿ ಹಿಡಿದ ಇತರೆ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ  ರಾಹುಲ್ ಅಗರ್ವಾಲ್ ರವರು ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಕಾರ್ಯಕ್ರಮಗಳನ್ನು ಶ್ಲಾಘಿಸಿ, ವಿಭಾಗದ ರೈಲ್ವೆ ನೌಕರರ ಕರ್ತವ್ಯ ಮತ್ತು ಅವರ ನಿಷ್ಠೆಯನ್ನು ಹೊಗಳಿದರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟುಗಳು ಮಾಡಿರುವ ಸಾಧನೆಗಳನ್ನು ಶ್ಲಾಘಿಸಿ ತಮ್ಮ ತಮ್ಮ ವೃತ್ತಿಯಲ್ಲಿನ ಮಹಾತ್ವಾಕಾಂಕ್ಷೆಯನ್ನು ತಲುಪಲು ಹಚ್ಚಿನ ಶ್ರಮವಹಿಸುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ  ರಾಹುಲ್ ಅಗರ್ವಾಲ್ ರವರು ಮತ್ತು ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಅಧ್ಯಕ್ಷರಾದ  ಪೂಜಾ ಅಗರ್ವಾಲ್ ರವರು 2020-21 ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು ದ್ವಿತೀಯ ಪಿ ಯು ಸಿ ಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ನೈಋತ್ಯ ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ನೌಕರರ 35 ಪ್ರತಿಭಾವಂತ ಮಕ್ಕಳಿಗೆ ವಿಧ್ಯಾರ್ಥಿ ವೇತನ ಪತ್ರ ಮತ್ತು ನಗದು ಬಹುಮಾನಗಳ ಜೊತೆಗೆ ಪ್ರತಿಭಾ ಪುರಸ್ಕಾರಗಳನ್ನು ನೀಡಿ ಸನ್ಮಾನಿಸಿದರು.

ಅಂತರಾಷ್ಟ್ರೀಯ ಬಾಸ್ಕೆಟ್ ಬಾಲ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರೀಯ ತಂಡದ ನಾಯಕರಾದ  ಬಾಂಧವ್ಯ ಮತ್ತು ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡದ ನವನೀತ ಹಾಗು ಇಲಾಖೆಯ ವಿವಿಧ ವಿಭಾಗಗಳಲ್ಲಿ ತಮ್ಮ ಕರ್ತವ್ಯಗಳನ್ನು ಹೆಚ್ಚಿನ ಕ್ಷಮತೆಯೊಂದಿಗೆ ನಡೆಸಿ ವಿಭಾಗದ ಕೀರ್ತಿಯನ್ನು ಹೆಚ್ಚಿಸಿದ ಇತರೆ 40 ರೈಲ್ವೆ ನೌಕರರನ್ನು ಸನ್ಮಾನಿಸಲಾಯಿತು.

ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಸಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯು ಪ್ರತಿಬಾರಿಯೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಮುಂಚೂಣಿಯಲ್ಲಿದ್ದೂ, ಆರೋಗ್ಯಕರ ಮತ್ತು ಸ್ಪರ್ಧಾತ್ಮಕ ವಾತಾವರಣ ನಿರ್ಮಿಸಿ, ಶೈಕ್ಷಣಿಕವಾಗಿ, ಕ್ರೀಡಾ ಕ್ಷೇತ್ರದಲ್ಲಿ ಹಾಗೂ ಇತರ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬೆಳವಣಿಗೆ ಕಾಣಲು ಸಹಾಯ ಮಾಡುತ್ತಿದೆ ಎಂದು ಹೇಳಿದರು ಮತ್ತು ಸಿಬ್ಬಂದಿವರ್ಗದ ಮಕ್ಕಳು ತೋರಿಸುತ್ತಿರುವ ಪ್ರತಿಭೆಗೆ ಅತ್ತೀವ ಹರ್ಷ ವ್ಯಕ್ತ ಪಡಿಸಿದರು. ಹಾಗು ಪುರಸ್ಕಾರ ಪಡೆಯದ ಇತರೆ ಮಕ್ಕಳು ಇದೇ ಎಲ್ಲದಕ್ಕೂ ಕೊನೆಯೆಂದು ವಿಶ್ವಾಸ ಕಳೆದುಕೊಳ್ಳದೆ ತಮ್ಮ ಕ್ಷಮತೆಯನ್ನು ತೋರಿಸಲು ಮುಂದೆ ಸಿಗುವ ಮತ್ತಷ್ಟು ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಒತ್ತಾಯಿಸಿದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago