ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಭಾನುವಾರ ಬೆಳಿಗ್ಗೆ ನಗರದ ಅರಮನೆ ಮುಂಭಾಗವಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಆರಂಭಗೊಂಡ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅವರಿಗೆ ಟ್ರಿನಿಟಿ ಸಂಸ್ಥೆಯ ಅಧ್ಯಕ್ಷ ಎಲೈಜರ್ ಮಿಲ್ಟನ್ ಸಾಥ್ ನೀಡಿದರು. ರೋಟರಿ ಮೈಸೂರು ಮಿಡ್ಟೌನ್, ‘ಆಂದೋಲನ’ ದಿನಪತ್ರಿಕೆ, ಸೈಕ್ಲಿಂಗ್ ಸೂರು ಟ್ರೈನಿಂಗ್ ಅಕಾಡೆಮಿ, ಮೋಟೋ ರೋಡ್ ಸಂಸ್ಥೆಗಳು ಸಹಭಾಗಿತ್ವ ವಹಿಸಿದ್ದವು.ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ ಅವರು, ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾಕಷ್ಟು ಮಂದಿ ಸಾವಿಗೀಡಾಗುತ್ತಿದ್ದಾರೆ. ಇದು ಆತಂಕದ ವಿಚಾರ. ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಬಗ್ಗೆ ಯುವ ಜನತೆಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ.
ಪೊಲೀಸ್ ಇಲಾಖೆ ಕೂಡ ಆಗಿಂದಾಗ್ಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ. ಅದರ ಜೊತೆಗೆ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಶಾಲಾ, ಕಾಲೇಜು ಹಂತದಲ್ಲಿೆುೀಂ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಟ್ರಿನಿಟಿ ಕಾಲೇಜು ಹಮ್ಮಿಕೊಂಡಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.
ಅರಮನೆ ಮುಂಭಾಗದಿಂದ ಆರಂಭವಾದ ರ್ಯಾಲಿ, ಹಾರ್ಡಿಂಜ್ ವೃತ್ತ, ಗನ್ಹೌಸ್, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್ಬಿ ರಸ್ತೆ, ಮೆಟ್ರೋಪೂಲ್ ವೃತ್ತ, ಕಾಳಿದಾಸ ರಸ್ತೆ ಮೂಲಕ ಸಾಗಿ ಟ್ರಿನಿಟಿ ಕಾಲೇಜು ಆವರಣದಲ್ಲಿ ಅಂತ್ಯಗೊಂಡಿತು.
ರ್ಯಾಲಿಯಲ್ಲಿ ೨೦೦ ಮಂದಿ ಸೈಕ್ಲಿಸ್ಟ್, ೧೦೦ ಮಂದಿ ಸಾರ್ವಜನಿಕರು, ೨೦೦ಕ್ಕೂ ಹೆಚ್ಚು ಮಂದಿ ಟ್ರನಿಟಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಕಾಲೇಜಿನ ಉಪ ಪ್ರಾಂಶುಪಾಲ ಎಂ.ಪ್ರವೀಣ್ಕುಮಾರ್ ವಹಿಸಿದ್ದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…