ಜಿಲ್ಲೆಗಳು

ಟ್ರಿನಿಟಿ ಕಾಲೇಜು ವತಿಯಿಂದ ‘ರೈಡ್ ಫಾರ್ ಲೈಫ್’ ರ್ಯಾಲಿ

ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ ನೂರಾರು ಜನರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಭಾನುವಾರ ಬೆಳಿಗ್ಗೆ ನಗರದ ಅರಮನೆ ಮುಂಭಾಗವಿರುವ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಆರಂಭಗೊಂಡ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅವರಿಗೆ ಟ್ರಿನಿಟಿ ಸಂಸ್ಥೆಯ ಅಧ್ಯಕ್ಷ ಎಲೈಜರ್ ಮಿಲ್ಟನ್ ಸಾಥ್ ನೀಡಿದರು. ರೋಟರಿ ಮೈಸೂರು ಮಿಡ್‌ಟೌನ್, ‘ಆಂದೋಲನ’ ದಿನಪತ್ರಿಕೆ, ಸೈಕ್ಲಿಂಗ್ ಸೂರು ಟ್ರೈನಿಂಗ್ ಅಕಾಡೆಮಿ, ಮೋಟೋ ರೋಡ್ ಸಂಸ್ಥೆಗಳು ಸಹಭಾಗಿತ್ವ ವಹಿಸಿದ್ದವು.ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ ಅವರು, ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಸಾಕಷ್ಟು ಮಂದಿ ಸಾವಿಗೀಡಾಗುತ್ತಿದ್ದಾರೆ. ಇದು ಆತಂಕದ ವಿಚಾರ. ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಬಗ್ಗೆ ಯುವ ಜನತೆಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ.
ಪೊಲೀಸ್ ಇಲಾಖೆ ಕೂಡ ಆಗಿಂದಾಗ್ಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ. ಅದರ ಜೊತೆಗೆ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಶಾಲಾ, ಕಾಲೇಜು ಹಂತದಲ್ಲಿೆುೀಂ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಟ್ರಿನಿಟಿ ಕಾಲೇಜು ಹಮ್ಮಿಕೊಂಡಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.
ಅರಮನೆ ಮುಂಭಾಗದಿಂದ ಆರಂಭವಾದ ರ್ಯಾಲಿ, ಹಾರ್ಡಿಂಜ್ ವೃತ್ತ, ಗನ್‌ಹೌಸ್, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತ, ಜೆಎಲ್‌ಬಿ ರಸ್ತೆ, ಮೆಟ್ರೋಪೂಲ್ ವೃತ್ತ, ಕಾಳಿದಾಸ ರಸ್ತೆ ಮೂಲಕ ಸಾಗಿ ಟ್ರಿನಿಟಿ ಕಾಲೇಜು ಆವರಣದಲ್ಲಿ ಅಂತ್ಯಗೊಂಡಿತು.
ರ್ಯಾಲಿಯಲ್ಲಿ ೨೦೦ ಮಂದಿ ಸೈಕ್ಲಿಸ್ಟ್, ೧೦೦ ಮಂದಿ ಸಾರ್ವಜನಿಕರು, ೨೦೦ಕ್ಕೂ ಹೆಚ್ಚು ಮಂದಿ ಟ್ರನಿಟಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಕಾಲೇಜಿನ ಉಪ ಪ್ರಾಂಶುಪಾಲ ಎಂ.ಪ್ರವೀಣ್‌ಕುಮಾರ್ ವಹಿಸಿದ್ದರು.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago