ಜಿಲ್ಲೆಗಳು

ತ್ರಿಬಲ್ ರೈಡಿಂಗ್: 537 ಪ್ರಕರಣ ದಾಖಲು

ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೈಸೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದು, ನ.೨೦ರಿಂದ ದ್ವಿಚಕ್ರ ವಾಹನಗಳಲ್ಲಿ ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಈ ವಿಶೇಷ ಕಾರ್ಯಾಚರಣೆಯಲ್ಲಿ ತ್ರಿಬಲ್ ರೈಡಿಂಗ್‌ನಿಂದ ಆಗಬಹುದಾದಂತಹ ರಸ್ತೆ ಅಪಘಾತಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಜತೆಗೆ ಈವರೆಗೆ ಒಟ್ಟು ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಮೈಸೂರು ನಗರ ಸಂಚಾರ ಪೊಲೀಸರಿಂದ ತ್ರಿಬಲ್ ರೈಡಿಂಗ್ ವಿರುದ್ಧ ಈ ವಿಶೇಷ ಕಾರ್ಯಾಚರಣೆಯು ಮುಂದುವರಿಯುವುದಲ್ಲದೇ, ಇತರೆ ಸಂಚಾರ ನಿಯಮಗಳ ಉಲ್ಲಂಘನೆಗಳ ವಿರುದ್ದವೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಸಂಬಂಧಪಟ್ಟ ಅವಶ್ಯ ದಾಖಲಾತಿಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳುವಂತೆ ಸಾರ್ವಜನಿಕರಿಗೆ ಮೈಸೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

11 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago