ಜಿಲ್ಲೆಗಳು

ಹಿಟ್‌ ಅಂಡ್‌ ರನ್‌ ನೂತನ ಕಾನೂನು ಖಂಡಿಸಿ ಲಾರಿ ಚಾಲಕರ ಪ್ರತಿಭಟನೆ

ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಳ್ಳೇಗಾಲ ನಗರದ ಬಸ್‌ ನಿಲ್ದಾಣದ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಹೊರಟು ಪ್ರಮುಖ ರಸ್ಹತೆಗಳಲ್ಲಿ ಸಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ನಂತರ ತಾಲ್ಲೂಕು ಕಚೇರಿ ತಲುಪಿ ಕೆಲಕಾಲ ಧರಣಿ ನಡೆಸಿದ್ರು.
ಈ ವೇಳೆ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ತಾಲ್ಲೂಕು ಅಧ್ಯಕ್ಷ ಭಾಸ್ಕರ್‌ ಮಾತನಾಡಿ ನೂತನ ಕಾನೂನಿನಿಂದ ಚಾಲಕರ ಮೇಲೆ ಭಾರೀ ಪೆಟ್ಟು ಬೀಳುತ್ತದೆ. ಈ ಕಾನೂನನ್ನು ಮರು ಪರಿಶೀಲನೆ ಮಾಡಬೇಕು. ಕಾನೂನನ್ನು ವಾಪಾಸ್‌ ಪಡೆಯಬೇಕು ಎಂದು ಮನವಿ ಮಾಡಿದ್ರು. ಇನ್ನು ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಾಜಿ ಶಾಸಕ ಆರ್ ಬಾಲರಾಜು ಹಾಗೂ ರಾಜ್ಯ ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ವೆಂಕಟೇಶ್ ಭೇಟಿ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಈ ವೇಳೆ ಜನ ಧ್ವನಿ ವೆಂಕಟೇಶ್ ಮಾತನಾಡಿ ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ನಿಯಮದ ಪ್ರಕಾರ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ 10 ವರ್ಷ ಜೈಲು 7 ಲಕ್ಷ ದಂಡ ವಿಧಿಸಬಹುದು ಎಂಬ ನಿಯಮದಿಂದ ಚಾಲಕರಿಗೆ ಹಾಗೂ ಮಾಲೀಕರಿಗೆ ಹೆಚ್ಚಿನ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರಿಗೆ ನಿಮ್ಮ ಮನವಿಯನ್ನು ಸಲ್ಲಿಸಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ನಾವು ಸಹ ಮನವಿ ಮಾಡಿಕೊಳ್ಳುತ್ತೇವೆ ಎಂದು ದನಿಗೂಡಿಸಿದ್ರು.
ಮಾಜಿ ಶಾಸಕ ಬಾಲರಾಜು ಮಾತನಾಡಿ ಬಿಎನ್ಎಸ್ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವು ಸಹ ಇದೆ. ಪ್ರತಿಯೊಬ್ಬ ಚಾಲಕರು ಸೂಕ್ತವಾದ ಮನಸ್ಥಿತಿ ಇಟ್ಟುಕೊಂಡು ನಡೆದರೆ ಮಾತ್ರ ಜನಜೀವನ ಚೆನ್ನಾಗಿರುತ್ತದೆ. ಚಾಲಕರ ಮುಷ್ಕರದಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಒತ್ತಡ ತಂದು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago