ಜಿಲ್ಲೆಗಳು

ಹಿಟ್‌ ಅಂಡ್‌ ರನ್‌ ನೂತನ ಕಾನೂನು ಖಂಡಿಸಿ ಲಾರಿ ಚಾಲಕರ ಪ್ರತಿಭಟನೆ

ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಳ್ಳೇಗಾಲ ನಗರದ ಬಸ್‌ ನಿಲ್ದಾಣದ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಹೊರಟು ಪ್ರಮುಖ ರಸ್ಹತೆಗಳಲ್ಲಿ ಸಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ನಂತರ ತಾಲ್ಲೂಕು ಕಚೇರಿ ತಲುಪಿ ಕೆಲಕಾಲ ಧರಣಿ ನಡೆಸಿದ್ರು.
ಈ ವೇಳೆ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ತಾಲ್ಲೂಕು ಅಧ್ಯಕ್ಷ ಭಾಸ್ಕರ್‌ ಮಾತನಾಡಿ ನೂತನ ಕಾನೂನಿನಿಂದ ಚಾಲಕರ ಮೇಲೆ ಭಾರೀ ಪೆಟ್ಟು ಬೀಳುತ್ತದೆ. ಈ ಕಾನೂನನ್ನು ಮರು ಪರಿಶೀಲನೆ ಮಾಡಬೇಕು. ಕಾನೂನನ್ನು ವಾಪಾಸ್‌ ಪಡೆಯಬೇಕು ಎಂದು ಮನವಿ ಮಾಡಿದ್ರು. ಇನ್ನು ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಾಜಿ ಶಾಸಕ ಆರ್ ಬಾಲರಾಜು ಹಾಗೂ ರಾಜ್ಯ ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ವೆಂಕಟೇಶ್ ಭೇಟಿ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಈ ವೇಳೆ ಜನ ಧ್ವನಿ ವೆಂಕಟೇಶ್ ಮಾತನಾಡಿ ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ನಿಯಮದ ಪ್ರಕಾರ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ 10 ವರ್ಷ ಜೈಲು 7 ಲಕ್ಷ ದಂಡ ವಿಧಿಸಬಹುದು ಎಂಬ ನಿಯಮದಿಂದ ಚಾಲಕರಿಗೆ ಹಾಗೂ ಮಾಲೀಕರಿಗೆ ಹೆಚ್ಚಿನ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರಿಗೆ ನಿಮ್ಮ ಮನವಿಯನ್ನು ಸಲ್ಲಿಸಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ನಾವು ಸಹ ಮನವಿ ಮಾಡಿಕೊಳ್ಳುತ್ತೇವೆ ಎಂದು ದನಿಗೂಡಿಸಿದ್ರು.
ಮಾಜಿ ಶಾಸಕ ಬಾಲರಾಜು ಮಾತನಾಡಿ ಬಿಎನ್ಎಸ್ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವು ಸಹ ಇದೆ. ಪ್ರತಿಯೊಬ್ಬ ಚಾಲಕರು ಸೂಕ್ತವಾದ ಮನಸ್ಥಿತಿ ಇಟ್ಟುಕೊಂಡು ನಡೆದರೆ ಮಾತ್ರ ಜನಜೀವನ ಚೆನ್ನಾಗಿರುತ್ತದೆ. ಚಾಲಕರ ಮುಷ್ಕರದಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಒತ್ತಡ ತಂದು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
andolana

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago