ಜಿಲ್ಲೆಗಳು

ಹಿಟ್‌ ಅಂಡ್‌ ರನ್‌ ನೂತನ ಕಾನೂನು ಖಂಡಿಸಿ ಲಾರಿ ಚಾಲಕರ ಪ್ರತಿಭಟನೆ

ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೊಳ್ಳೇಗಾಲ ನಗರದ ಬಸ್‌ ನಿಲ್ದಾಣದ ಬಳಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಹೊರಟು ಪ್ರಮುಖ ರಸ್ಹತೆಗಳಲ್ಲಿ ಸಾಗಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ನಂತರ ತಾಲ್ಲೂಕು ಕಚೇರಿ ತಲುಪಿ ಕೆಲಕಾಲ ಧರಣಿ ನಡೆಸಿದ್ರು.
ಈ ವೇಳೆ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ತಾಲ್ಲೂಕು ಅಧ್ಯಕ್ಷ ಭಾಸ್ಕರ್‌ ಮಾತನಾಡಿ ನೂತನ ಕಾನೂನಿನಿಂದ ಚಾಲಕರ ಮೇಲೆ ಭಾರೀ ಪೆಟ್ಟು ಬೀಳುತ್ತದೆ. ಈ ಕಾನೂನನ್ನು ಮರು ಪರಿಶೀಲನೆ ಮಾಡಬೇಕು. ಕಾನೂನನ್ನು ವಾಪಾಸ್‌ ಪಡೆಯಬೇಕು ಎಂದು ಮನವಿ ಮಾಡಿದ್ರು. ಇನ್ನು ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಮಾಜಿ ಶಾಸಕ ಆರ್ ಬಾಲರಾಜು ಹಾಗೂ ರಾಜ್ಯ ಬಿಜೆಪಿ ಒಬಿಸಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನ ಧ್ವನಿ ವೆಂಕಟೇಶ್ ಭೇಟಿ ನೀಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಈ ವೇಳೆ ಜನ ಧ್ವನಿ ವೆಂಕಟೇಶ್ ಮಾತನಾಡಿ ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ನಿಯಮದ ಪ್ರಕಾರ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಚಾಲಕರಿಗೆ 10 ವರ್ಷ ಜೈಲು 7 ಲಕ್ಷ ದಂಡ ವಿಧಿಸಬಹುದು ಎಂಬ ನಿಯಮದಿಂದ ಚಾಲಕರಿಗೆ ಹಾಗೂ ಮಾಲೀಕರಿಗೆ ಹೆಚ್ಚಿನ ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರಿಗೆ ನಿಮ್ಮ ಮನವಿಯನ್ನು ಸಲ್ಲಿಸಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ನಾವು ಸಹ ಮನವಿ ಮಾಡಿಕೊಳ್ಳುತ್ತೇವೆ ಎಂದು ದನಿಗೂಡಿಸಿದ್ರು.
ಮಾಜಿ ಶಾಸಕ ಬಾಲರಾಜು ಮಾತನಾಡಿ ಬಿಎನ್ಎಸ್ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ನಿಮ್ಮ ಪ್ರತಿಭಟನೆಗೆ ನಮ್ಮ ಸಹಕಾರವು ಸಹ ಇದೆ. ಪ್ರತಿಯೊಬ್ಬ ಚಾಲಕರು ಸೂಕ್ತವಾದ ಮನಸ್ಥಿತಿ ಇಟ್ಟುಕೊಂಡು ನಡೆದರೆ ಮಾತ್ರ ಜನಜೀವನ ಚೆನ್ನಾಗಿರುತ್ತದೆ. ಚಾಲಕರ ಮುಷ್ಕರದಿಂದ ಜನ ಜೀವನ ಅಸ್ತವ್ಯಸ್ತವಾಗುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಒತ್ತಡ ತಂದು ನಿಮಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago