ಜಿಲ್ಲೆಗಳು

ಅರಿಶಿನ ಸಂಸ್ಕರಣೆ ಘಟಕಕ್ಕೆ ಡಿಸೆಂಬರ್‌ನಲ್ಲಿ ಚಾಲನೆ

ಒಂದು ಬೆಳೆ-ಒಂದು ಉತ್ಪನ್ನದಡಿ ಅರಿಶಿನ ಬೆಳೆ ಆಯ್ಕೆ

ರಾಜೇಶ್ ಬೆಂಡರವಾಡಿ
ಚಾಮರಾಜನಗರ: ಒಂದು ಜಿಲ್ಲೆ-ಒಂದು ಉತ್ಪನ್ನದಡಿ(ಒಡಿಒಪಿ) ಜಿಲ್ಲೆಯಲ್ಲಿ ಅರಿಶಿನ ಬೆಳೆ ಆಯ್ಕೆಯಾಗಿದ್ದು ಇದರ ಸಂಸ್ಕರಣಾ ಘಟಕ ನಗರ ಹೊರವಲುಂದ ಕೆವಿಕೆಯಲ್ಲಿ ಮುಂದಿನ ತಿಂಗಳು ಆರಂಭ ಆಗಲಿದೆ.
ಅರಿಶಿನ ಕೊಯ್ಲು ಮಾಡಿ ಈ ಘಟಕಕ್ಕೆ ತಂದುಹಾಕಿದರೆ ಅದು ಕ್ಲೀನ್, ಪಾಲಿಷ್ ಹಾಗೂ ತುಂಡುವಾಡಿ ಒಣಗಿಸುತ್ತದೆ. ಪೌಡರ್ ಸಹ ಮಾಡುತ್ತದೆ.
ರೈತರು ಅರಿಶಿನವನ್ನು ೧೦ರಿಂದ ೧೨ತಿಂಗಳು ಕಷ್ಟಪಟ್ಟು ಬೆಳೆಯುವುದಕ್ಕಿಂತ ಅದನ್ನು ಕ್ಲೀನ್ ಮಾಡಿ ಬೇಯಿಸಿ- ಒಣಗಿಸಿ ಮಾರಾಟ ಮಾಡುವುದು ದೊಡ್ಡ ತಾಪತ್ರಯವಾಗಿತ್ತು. ಇದಕ್ಕೆ ಸಾಕಷ್ಟು ಶ್ರಮ, ಸಮಯ ಹಿಡಿಯುತ್ತಿತ್ತು. ಹೀಗಾಗಿ ನೂತನ ಈ ಘಟಕ ಪ್ರಾರಂಭದಿಂದ ಅರಿಶಿನ ಬೆಳೆಗಾರರಿಗೆ ಅತ್ಯಂತ ಅನುಕೂಲವಾಗಲಿದೆ.
ಅರಿಶಿನ ಈ ಭಾಗದ ಮುಖ್ಯ ಬೆಳೆಗಳಲ್ಲಿ ಒಂದಾಗಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆತ್ಮನಿರ್ಭರ ಯೋಜನೆಗೆ ಬಲ ತುಂಬಲು ಒಂದುಬೆಳೆ-ಒಂದು ಉತ್ಪನ್ನದಡಿ ಜಿಲ್ಲೆಯಿಂದ ಅರಿಶಿನ ಬೆಳೆುಂನ್ನು ಆಯ್ಕೆ ಮಾಡಿ ಸುಮಾರು ೭೫ಲಕ್ಷ ರೂ. ವೆಚ್ಚದಲ್ಲಿ ಸಂಸ್ಕರಣ ಘಟಕ ಆರಂಭಿಸಲಾಗುತ್ತಿದೆ.
ಘಟಕದ ನಿರ್ವಹಣೆಯನ್ನು ನಿಯಮಾನುಸಾರ ಕಂಪನಿಯೊಂದಕ್ಕೆ ಟೆಂಡರ್ ನೀಡಲಾಗಿದ್ದು ಅವರು ಡಿಸೆಂಬರ್‌ನಲ್ಲಿ ಚಾಲನೆ ಕೊಡಲಿದ್ದಾರೆ. ಸಂಸ್ಕರಣೆಗೆ ಸಂಬಂಧಿಸಿದ  ಯಂತ್ರಗಳನ್ನು ತಂದಿರಿಸಲಾಗಿದ್ದು ಜೋಡಣೆ ಮತ್ತು ವಿದ್ಯುತ್ ಸಂಪರ್ಕ ನೀಡುವುದು ಬಾಕಿ ಇದೆ. ಬೆಂಗಳೂರು ಕೃಷಿವಿಶ್ವವಿದ್ಯಾಲಯ ಇದರ ಜವಾಬ್ದಾರಿ ಹೊತ್ತಿದೆ.
ಅರಿಶಿನ ಸಂಸ್ಕರಣೆಯ ನಿಗಧಿತ ವೆಚ್ಚ ಪಾವತಿಸಿ ರೈತರು ಅಲ್ಲಿಯೇ ವ್ಯಾಪಾರಿಗಳಿಗೆ ಮಾರಾಟ ಮಾಡಲೂಬಹುದು. ಅಥವಾ ಬೇಕಾದಕಡೆ ತೆಗೆದುಕೊಂಡು ಹೋಗಬಹುದಾಗಿದೆ. ಪ್ರತಿ ಜಿಲ್ಲೆಯಿಂದ ಒಂದು ಉತ್ಪನ್ನ ಆಯ್ಕೆ  ಮಾಡುವುದು, ಬ್ಯ್ರಾಂಡ್ ಮಾಡುವುದು ಮತ್ತು ಪ್ರಚಾರ ಮಾಡುವುದು ಆತ್ಮನಿರ್ಭರ ಯೋಜನೆಯ ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ಅರಿಶಿನವನ್ನು ಕೊಂಡೊಯ್ಯಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಸಾಮಾನ್ಯವಾಗಿ ಅರಿಶಿನ ಕೊಯ್ಲು ಆರಂಭವಾಗುವುದು ಡಿಸೆಂಬರ್‌ನಲ್ಲಿ. ಈ ಸಮಯಕ್ಕೆ ಸರಿಯಾಗಿ ಸಂಸ್ಕರಣ ಘಟಕ ಪ್ರಾರಂಭಿಸಲಾಗುತ್ತಿದೆ. ಮೈಸೂರು, ಬಾಗಲಕೋಟೆ, ಬೀದರ್ ಇನ್ನಿತರ ಕಡೆಯೂ ಅರಿಶಿನ ಬೆಳೆಯಲಾಗುತ್ತದೆ. ಚಾ.ನಗರ ಅರಿಶಿನದಲ್ಲಿ ಹೆಚ್ಚಿನ ಕರಿಕ್ಯುಲಮ್ ಅಂಶ ಇರುವುದರಿಂದ ಮೊದಲಿಂದಲೂ ಇಲ್ಲಿಯು ಅರಿಶಿನಕ್ಕೆ ತುಂಬಾ ಬೇಡಿಕೆ. ಇಲ್ಲಿ ಬೆಳೆದ ಬಹುಪಾಲು ಅರಿಶಿನ ತಮಿಳುನಾಡು ಇನ್ನಿತರ ಕಡೆಗೆ ಮಾರಾಟವಾಗುತ್ತದೆ.


ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಕೆವಿಕೆ) ಅರಿಶಿನ ಸಂಸ್ಕರಣೆ ಘಟಕ ಡಿಸೆಂಬರ್‌ನಲ್ಲಿ ಕಾರ್ಯಾರಂಭ ಆಗಲಿದ್ದು ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳು ಸಾಗಿವೆ.
-ಮೋಹನ್‌ಕುಮಾರ್ ಎ.ಬಿ.
ತೋಟಗಾರಿಕಾ ತಜ್ಞ, ಕೆವಿಕೆ.


ಸಂಸ್ಕರಣೆ ಘಟಕದಲ್ಲಿ ದಿನವೊಂದಕ್ಕೆ ಕನಿಷ್ಠ ೮ರಿಂದ ೧೦ಟನ್ ಅರಿಶಿನ ಸಂಸ್ಕರಣೆ ಮಾಡಬಹುದು. ೨೪ಗಂಟೆಯೂ ಯಂತ್ರ ಮುನ್ನಡೆಸಿದರೆ ೨೫ಟನ್ ಸಂಸ್ಕರಣೆ ಮಾಡಬಹುದು ಎಂದು ತಜ್ಞರೊಬ್ಬರು ಪತ್ರಿಕೆಗೆ ಮಾಹಿತಿ ನೀಡಿದರು.

andolanait

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

1 hour ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

1 hour ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

1 hour ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

2 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

5 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

5 hours ago