ಜಿಲ್ಲೆಗಳು

ಅರಣ್ಯದಲ್ಲಿ ತ್ಯಾಜ್ಯ ಸುರಿದ ಇಬ್ಬರ ಬಂಧನ

ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಇಲ್ಲಿನ ಕೂಟುಹೊಳೆ ಸೇತುವೆ ಸಮೀಪ ಎಸೆಯುತ್ತಿದ್ದರು. ಈ ವೇಳೆ ಬ್ರಹ್ಮಗಿರಿ ವನ್ಯಜೀವಿ ವಲಯ ಹಾಗೂ ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬ್ರಹ್ಮಗಿರಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಡ್ಯಾನ್ಸಿ ದೇಚಮ್ಮ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಲೋಕೇಶ್, ಸಿಬ್ಬಂದಿಯಾದ ಸ್ವಾಮಿ, ಸುಬ್ಬಯ್ಯ, ಮಾಕುಟ್ಟ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಸುಹಾನಾ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಶೇಖರ, ಸಿಬ್ಬಂದಿ ಶಜಿ, ರೋಷನ್ ಹಾಜರಿದ್ದರು.

andolanait

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

60 mins ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

1 hour ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

1 hour ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

2 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

2 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

2 hours ago