ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಇಲ್ಲಿನ ಕೂಟುಹೊಳೆ ಸೇತುವೆ ಸಮೀಪ ಎಸೆಯುತ್ತಿದ್ದರು. ಈ ವೇಳೆ ಬ್ರಹ್ಮಗಿರಿ ವನ್ಯಜೀವಿ ವಲಯ ಹಾಗೂ ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬ್ರಹ್ಮಗಿರಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಡ್ಯಾನ್ಸಿ ದೇಚಮ್ಮ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಲೋಕೇಶ್, ಸಿಬ್ಬಂದಿಯಾದ ಸ್ವಾಮಿ, ಸುಬ್ಬಯ್ಯ, ಮಾಕುಟ್ಟ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಸುಹಾನಾ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಶೇಖರ, ಸಿಬ್ಬಂದಿ ಶಜಿ, ರೋಷನ್ ಹಾಜರಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…