ಜಿಲ್ಲೆಗಳು

ಅರಣ್ಯದಲ್ಲಿ ತ್ಯಾಜ್ಯ ಸುರಿದ ಇಬ್ಬರ ಬಂಧನ

ಮಡಿಕೇರಿ: ಕೇರಳದಿಂದ ಕಸ ತಂದು ಇಲ್ಲಿಯ ಮಾಕುಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಪೆಂಚಾಳಯ್ಯ ಹಾಗೂ ಶೀನ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಇಲ್ಲಿನ ಕೂಟುಹೊಳೆ ಸೇತುವೆ ಸಮೀಪ ಎಸೆಯುತ್ತಿದ್ದರು. ಈ ವೇಳೆ ಬ್ರಹ್ಮಗಿರಿ ವನ್ಯಜೀವಿ ವಲಯ ಹಾಗೂ ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಬ್ರಹ್ಮಗಿರಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಡ್ಯಾನ್ಸಿ ದೇಚಮ್ಮ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಲೋಕೇಶ್, ಸಿಬ್ಬಂದಿಯಾದ ಸ್ವಾಮಿ, ಸುಬ್ಬಯ್ಯ, ಮಾಕುಟ್ಟ ಪ್ರಾದೇಶಿಕ ವಲಯದ ವಲಯ ಅರಣ್ಯಾಧಿಕಾರಿ ಸುಹಾನಾ, ಉಪ ವಲಯ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಶೇಖರ, ಸಿಬ್ಬಂದಿ ಶಜಿ, ರೋಷನ್ ಹಾಜರಿದ್ದರು.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

8 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

8 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

9 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

10 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

10 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

12 hours ago