ಜಿಲ್ಲೆಗಳು

ಚಿರತೆ ದಾಳಿಗೆ ಎರಡು ಇಲಾಚಿ ಕರು ಬಲಿ !

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ಎರಡು ದಿನಗಳಿಂದ ಸಿದ್ದಾಚಾರಿ ಎಂಬುವರಿಗೆ ಸೇರಿದ ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟು ಹಾಕಲಾಗಿದ್ದ ಐದು ಇಲಾಚಿ ಕರುಗಳ ಪೈಕಿ ಕಳೆದ ಎರಡು ದಿನಗಳಿಂದ ಪ್ರತಿ ದಿನಕ್ಕೊಂದು ಕರುವನ್ನು ತಿಂದು ಹಾಕಿದೆ.

ಮೊದಲನೆಯ ದಿನ ಚಿರತೆ ಕರುವನ್ನು ಎಳೆದೊಯ್ದು ಅರ್ಧ ತಿಂದಿತ್ತು. ಈ ವೇಳೆ ರೈತ ಸಿದ್ದಾಚಾರಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಮತ್ತೆ ಇನ್ನೆರಡು ದಿನ ಚಿರತೆ ಬರುವುದಿಲ್ಲ ಎಂದು ತಿಳಿಸಿದ್ದರು.

ಆದರೆ ಮರುದಿನವೇ ಇನ್ನೊಂದು ಇಲಾಚಿ ಕರುವನ್ನು ಎಳೆದೊಯ್ದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕರುಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ತಿಳಿಯುತ್ತಿದ್ದಂತೆ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಹರೀಶ್ ಸಿದ್ದಾಚಾರಿ ಜಮೀನಿಗೆ ಸಿಸಿ ಕ್ಯಾಮೆರಾ ವನ್ನು ಸಂಜೆ 6 ಗಂಟೆಯ ವೇಳೆಗೆ ಅಳವಡಿಸಿದ್ದಾರೆ.

ಕ್ಯಾಮರ ಅಳವಡಿಸಿದ 40 ನಿಮಿಷದಲ್ಲಿಯೇ ಚಿರತೆ ಮತ್ತೊಮ್ಮೆ ಕೊಟ್ಟಿಗೆಯ ಬಳಿ ಬಂದಿರುವುದು ಸೆರೆಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ಎರಡು ಇಲಾಚಿ ಕರುಗಳಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಸತತವಾಗಿ ಚಿರತೆ ದಾಳಿ ನಡೆಸಿ ಮೇಕೆ ನಾಯಿ ಕರುಗಳನ್ನು ತಿಂದು ಹಾಕಿದೆ. ತೋಟದ ಮನೆಯಲ್ಲಿ ಇರುವ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳುಗಳನ್ನು ಪೋಷಕರು ಸಂಜೆಯ ನಂತರ ತಿರುಗಾಡಲು ಬಿಡಬಾರದು. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಶೀಘ್ರವೇ ಚಿರತೆ ಸೆರೆ ಹಿಡಿಯಬೇಕು ಎಂದು ಪರಿವರ್ತನಾ ಅರಣ್ಯ ಸಮಿತಿ ಅಧ್ಯಕ್ಷರು ಎನ್ ಕೃಷ್ಣಮೂರ್ತಿ  ಆಗ್ರಹಿಸಿದ್ದಾರೆ.

andolanait

Recent Posts

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

51 mins ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

1 hour ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

1 hour ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

1 hour ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

2 hours ago