ಜಿಲ್ಲೆಗಳು

ಚಿರತೆ ದಾಳಿಗೆ ಎರಡು ಇಲಾಚಿ ಕರು ಬಲಿ !

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ಎರಡು ದಿನಗಳಿಂದ ಸಿದ್ದಾಚಾರಿ ಎಂಬುವರಿಗೆ ಸೇರಿದ ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟು ಹಾಕಲಾಗಿದ್ದ ಐದು ಇಲಾಚಿ ಕರುಗಳ ಪೈಕಿ ಕಳೆದ ಎರಡು ದಿನಗಳಿಂದ ಪ್ರತಿ ದಿನಕ್ಕೊಂದು ಕರುವನ್ನು ತಿಂದು ಹಾಕಿದೆ.

ಮೊದಲನೆಯ ದಿನ ಚಿರತೆ ಕರುವನ್ನು ಎಳೆದೊಯ್ದು ಅರ್ಧ ತಿಂದಿತ್ತು. ಈ ವೇಳೆ ರೈತ ಸಿದ್ದಾಚಾರಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ ಪರಿಣಾಮ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ, ಮತ್ತೆ ಇನ್ನೆರಡು ದಿನ ಚಿರತೆ ಬರುವುದಿಲ್ಲ ಎಂದು ತಿಳಿಸಿದ್ದರು.

ಆದರೆ ಮರುದಿನವೇ ಇನ್ನೊಂದು ಇಲಾಚಿ ಕರುವನ್ನು ಎಳೆದೊಯ್ದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಕರುಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ತಿಳಿಯುತ್ತಿದ್ದಂತೆ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಹರೀಶ್ ಸಿದ್ದಾಚಾರಿ ಜಮೀನಿಗೆ ಸಿಸಿ ಕ್ಯಾಮೆರಾ ವನ್ನು ಸಂಜೆ 6 ಗಂಟೆಯ ವೇಳೆಗೆ ಅಳವಡಿಸಿದ್ದಾರೆ.

ಕ್ಯಾಮರ ಅಳವಡಿಸಿದ 40 ನಿಮಿಷದಲ್ಲಿಯೇ ಚಿರತೆ ಮತ್ತೊಮ್ಮೆ ಕೊಟ್ಟಿಗೆಯ ಬಳಿ ಬಂದಿರುವುದು ಸೆರೆಯಾಗಿದೆ. ಇನ್ನಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತಪಟ್ಟಿರುವ ಎರಡು ಇಲಾಚಿ ಕರುಗಳಿಗೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ಸತತವಾಗಿ ಚಿರತೆ ದಾಳಿ ನಡೆಸಿ ಮೇಕೆ ನಾಯಿ ಕರುಗಳನ್ನು ತಿಂದು ಹಾಕಿದೆ. ತೋಟದ ಮನೆಯಲ್ಲಿ ಇರುವ ವಯೋವೃದ್ಧರು ಹಾಗೂ ಚಿಕ್ಕ ಮಕ್ಕಳುಗಳನ್ನು ಪೋಷಕರು ಸಂಜೆಯ ನಂತರ ತಿರುಗಾಡಲು ಬಿಡಬಾರದು. ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿ ಶೀಘ್ರವೇ ಚಿರತೆ ಸೆರೆ ಹಿಡಿಯಬೇಕು ಎಂದು ಪರಿವರ್ತನಾ ಅರಣ್ಯ ಸಮಿತಿ ಅಧ್ಯಕ್ಷರು ಎನ್ ಕೃಷ್ಣಮೂರ್ತಿ  ಆಗ್ರಹಿಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

30 mins ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

60 mins ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

1 hour ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

2 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

2 hours ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

4 hours ago