ಜಿಲ್ಲೆಗಳು

ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪ ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಕಾರು ಚಾಲಕ ಶಾಕಿಬ್ (25), ಸದ್ದಾಂ ಷರೀಫ್(23) ಮೃತರು. ನಸೀರಾ(24), ನಿಖತ್(20), ಜಹೀಬ್(36) ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಂಬಂಧಿಕರ ಬೀಗರ ಔತಣ ಕೂಟಕ್ಕೆಂದು ಬೆಂಗಳೂರಿಗೆ ಹೋಗಿ ಕಾರಿನಲ್ಲಿ ವಾಪಸ್ ಮಂಡ್ಯಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಕಾರು 3:30ರ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತ ಸದ್ದಾಂ ಅವರು ಮಂಡ್ಯ ನಗರದ ಗುತ್ತಲು ಬಡಾವಣೆಯ ವಿಜಯ ಕರ್ನಾಟಕ ಪತ್ರಿಕೆ ವಿತರಕ ಕಲೀಂ ಷರೀಫ್ ಅವರ ಪುತ್ರ. ಕಲೀಂ‌ ಷರೀಫ್ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರಿಂದ ಸದ್ದಾಂ ಅವರೇ ಮನೆಮನೆಗೆ ಪತ್ರಿಕೆಗಳ ವಿತರಣೆ ನೋಡಿಕೊಳ್ಳುತ್ತಿದ್ದರು. ಪತ್ರಿಕೆಗಳನ್ನು ವಿತರಣೆ ಮಾಡುವ ಸಲುವಾಗಿಯೇ ಮಧ್ಯರಾತ್ರಿ ಬೆಂಗಳೂರಿನಿಂದ ಮಂಡ್ಯಗೆ ಹೊರಟಿದ್ದರು. ಅಪಘಾತದಲ್ಲಿ ಮಗ ಸತ್ತಿರುವ ಸುದ್ದಿ ತಿಳಿದ ಬಳಿಕವೂ ಕಲೀಂ‌ ಷರೀಫ್ ಅವರು ಖುದ್ದು ತಾವೇ ಹೋಗಿ 600ಕ್ಕೂ ಹೆಚ್ಚು ಪತ್ರಿಕೆಗಳನ್ನು ವಿತರಣೆ ಮಾಡಿ, ವೃತ್ತಪರತೆ ಪ್ರದರ್ಶಿದ್ದಾರೆ. ಘಟನೆ ಸಂಬಂಧ ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

2 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

3 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

3 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

7 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

7 hours ago