ಜಿಲ್ಲೆಗಳು

ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಮಂಡ್ಯ: ಮದ್ದೂರು ತಾಲೂಕು ಗೆಜ್ಜಲಗೆರೆ ಸಮೀಪ ಸೋಮವಾರ ನಸುಕಿನ ಜಾವ ಲಾರಿ ಮತ್ತು ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಕಾರು ಚಾಲಕ ಶಾಕಿಬ್ (25), ಸದ್ದಾಂ ಷರೀಫ್(23) ಮೃತರು. ನಸೀರಾ(24), ನಿಖತ್(20), ಜಹೀಬ್(36) ಗಾಯಗೊಂಡಿದ್ದು, ಮಂಡ್ಯದ ಮಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಂಬಂಧಿಕರ ಬೀಗರ ಔತಣ ಕೂಟಕ್ಕೆಂದು ಬೆಂಗಳೂರಿಗೆ ಹೋಗಿ ಕಾರಿನಲ್ಲಿ ವಾಪಸ್ ಮಂಡ್ಯಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಕಾರು 3:30ರ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮೃತ ಸದ್ದಾಂ ಅವರು ಮಂಡ್ಯ ನಗರದ ಗುತ್ತಲು ಬಡಾವಣೆಯ ವಿಜಯ ಕರ್ನಾಟಕ ಪತ್ರಿಕೆ ವಿತರಕ ಕಲೀಂ ಷರೀಫ್ ಅವರ ಪುತ್ರ. ಕಲೀಂ‌ ಷರೀಫ್ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದ್ದರಿಂದ ಸದ್ದಾಂ ಅವರೇ ಮನೆಮನೆಗೆ ಪತ್ರಿಕೆಗಳ ವಿತರಣೆ ನೋಡಿಕೊಳ್ಳುತ್ತಿದ್ದರು. ಪತ್ರಿಕೆಗಳನ್ನು ವಿತರಣೆ ಮಾಡುವ ಸಲುವಾಗಿಯೇ ಮಧ್ಯರಾತ್ರಿ ಬೆಂಗಳೂರಿನಿಂದ ಮಂಡ್ಯಗೆ ಹೊರಟಿದ್ದರು. ಅಪಘಾತದಲ್ಲಿ ಮಗ ಸತ್ತಿರುವ ಸುದ್ದಿ ತಿಳಿದ ಬಳಿಕವೂ ಕಲೀಂ‌ ಷರೀಫ್ ಅವರು ಖುದ್ದು ತಾವೇ ಹೋಗಿ 600ಕ್ಕೂ ಹೆಚ್ಚು ಪತ್ರಿಕೆಗಳನ್ನು ವಿತರಣೆ ಮಾಡಿ, ವೃತ್ತಪರತೆ ಪ್ರದರ್ಶಿದ್ದಾರೆ. ಘಟನೆ ಸಂಬಂಧ ಮದ್ದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago