ಜಿಲ್ಲೆಗಳು

ವಾರಾಂತ್ಯಕ್ಕೆ ʼನಟನ ರಂಗಶಾಲೆʼಯಲ್ಲಿ ಎರಡು ವಿಶೇಷ ನಾಟಕಗಳ ಪ್ರಸ್ತುತಿ!

ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದ ಬಗ್ಗೆ ತಿಳಿಸಿದ ಅವರು, ಮೈಸೂರು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನ ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸಿಕೊಂಡು ಬಂದಿದೆ. ಆದರೆ ಈ ಬಾರಿ ವಾರಾಂತ್ಯದಲ್ಲಿ ಎರಡು ವಿಶೇಷ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ಫೆಬ್ರವರಿ ೦೩ರಂದು ಸಂಜೆ ೬.೩೦ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ೨೦೨೩-೨೪ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೇ ಅಭ್ಯಾಸೀ ಪ್ರಯೋಗ, ಹೆಸರಾಂತ ರಂಗಕರ್ಮಿ ಡಾ.ಶ್ರೀಪಾದ ಭಟ್ ನಿರ್ದೇಶನದ ‘ಕನ್ನಡ ಕಾವ್ಯಕಣಜ’ ನಾಟಕವನ್ನು ಪ್ರದರ್ಶನಗೊಳಿಸಲಿದ್ದಾರೆ ಎಂದರು.

ಇನ್ನು, ಫೆಬ್ರವರಿ ೦೪ರಂದು ಸಂಜೆ ೦೬.೩೦ಕ್ಕೆ ರಂಗದಾಸೋಹ (ರಿ), ಬೆಂಗಳೂರು ಅಭಿನಯಿಸುವ, ಎನ್.ಸಿ. ಮಹೇಶ್ ನಿರ್ದೇಶನದ ‘ನೀ ಒಥೆಲೋವಾದರೆ, ನಾ ಇಯಾಗೊ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : ೭೨೫೯೫೩೭೭೭೭, ೯೪೮೦೪೬೮೩೨೭, ೯೮೪೫೫೯೫೫೦೫

‘ಕನ್ನಡ ಕಾವ್ಯಕಣಜ’ ನಾಟಕದ ಕುರಿತು: ಇದೊಂದು ಕಾವ್ಯ ಪ್ರಯೋಗ. ಕಾವ್ಯ ಪ್ರಸ್ತುತಿ. ಕನ್ನಡ ನಾಡು ನುಡಿ ಇದುವರೆಗೂ ಬೆಳೆಸಿಕೊಂಡು ಬಂದ ಸಂಬಂಧದ ವಿವಿಧ ವಿನ್ಯಾಸಗಳನ್ನು ಕವಿ ಪದಗಳ ಮೂಲಕ ಕಾಣಲಾಗಿದೆ. ಇಲ್ಲಿ ಶಾಸನಗಳಿವೆ, ಕವನಗಳಿವೆ, ಹಾಡಿದೆ, ವಚನವಿದೆ, ಕತೆಗಳಿವೆ, ಕಾದಂಬರಿಯ ಭಾಗಗಳಿವೆ. ಇವೆಲ್ಲವೂ ನಟರ ಶರೀರ ಮತ್ತು ಶಾರೀರಗಳನ್ನು ಆಧರಿಸಿ ಅಭಿನೀತಗೊಳ್ಳಲಿದೆ. ಕನ್ನಡ ಕಾವ್ಯ ಕಣಜ, ಕನ್ನಡ ಕಾವ್ಯಗಳ ರಂಗಪ್ರಸ್ತುತಿ. ಶಾಸನ ಪದಗಳಿಂದ ಆರಂಭಿಸಿ ಈ ಹೊತ್ತಿನವರೆಗಿನ ಸಾಹಿತ್ಯ ಚರಿತ್ರೆಯನ್ನು ಅನುಲಕ್ಷಿಸಿ ಅವುಗಳಲ್ಲಿ ಕೆಲವು ಪಠ್ಯಗಳನ್ನು ಆಯ್ದು ಪ್ರಸ್ತುತ ಪಡಿಸಲಾಗುತ್ತಿದೆ. ಇಲ್ಲಿ ಆದರ್ಶ ಮನುಷ್ಯರ ಹುಡುಕಾಟವಿದೆ; ಸಂಬಂಧಗಳ ವಿವಿಧ ಸ್ವರೂಪಗಳ ಅನ್ವೇಷಣೆಯಿದೆ. ವರ್ಣ, ವರ್ಗ, ಲಿಂಗ ತಾರತಮ್ಯಗಳ ಸ್ವರೂಪ ಕಾರಣಗಳ ಹುಡುಕಾಟದ ಪ್ರಯತ್ನವೂ ಇಲ್ಲಿದೆ. ಕಾವ್ಯಗಳನ್ನು ರಂಗದ ಮೇಲೆ ಪ್ರಯೋಗಿಸಬಹುದಾದ ಹಲವು ಮಾದರಿಗಳ ಪ್ರಸ್ತುತಿಯೂ ಇಲ್ಲಿದೆ.‘ನೀ ಒಥೆಲೋವಾದರೆ, ನಾ ಇಯಾಗೊ’ ನಾಟಕದ ಕುರಿತು: ಇದು ಶೇಕ್ಸ್ಪಿಯರ್‌ನ ಒಥೆಲೋ ನಾಟಕದ ರೂಪಾಂತರ. ಒಂದರ್ಥದಲ್ಲಿ ಸಮಕಾಲೀನ ರೂಪ. ಮೂಲ ನಾಟಕದಲ್ಲಿನ ರಾಜಪ್ರಭುತ್ವ ಮತ್ತು ಯುದ್ಧ, ಹೋರಾಟಗಳು ಈ ನಾಟಕದಲ್ಲಿ ಇಂದಿನ ವಿದ್ಯಮಾನದ ಪರ್ಯಾಯ ರೂಪಗಳನ್ನು ಪಡೆದುಕೊಂಡಿದೆ. ಮೂಲ ಕಥೆಯ ಚೌಕಟ್ಟಿನ ಒಳಗೆ ಇಂದಿನ ಬದುಕಿನ ಗತಿಯನ್ನು ಚಿತ್ರಿಸಲಾಗಿದೆ.

andolanait

Recent Posts

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

2 mins ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

30 mins ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

32 mins ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

1 hour ago

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…

2 hours ago

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

2 hours ago