ಜಿಲ್ಲೆಗಳು

ವಾರಾಂತ್ಯಕ್ಕೆ ʼನಟನ ರಂಗಶಾಲೆʼಯಲ್ಲಿ ಎರಡು ವಿಶೇಷ ನಾಟಕಗಳ ಪ್ರಸ್ತುತಿ!

ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕಾರ್ಯಕ್ರಮದ ಬಗ್ಗೆ ತಿಳಿಸಿದ ಅವರು, ಮೈಸೂರು ಸುತ್ತಮುತ್ತಲಿನ ಸದಭಿರುಚಿಯ, ಸಹೃದಯ ರಂಗಾಸಕ್ತರಿಗಾಗಿ ನಟನ ವಾರಾಂತ್ಯ ರಂಗ ಪ್ರದರ್ಶನಗಳನ್ನು ನಡೆಸಿಕೊಂಡು ಬಂದಿದೆ. ಆದರೆ ಈ ಬಾರಿ ವಾರಾಂತ್ಯದಲ್ಲಿ ಎರಡು ವಿಶೇಷ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ಫೆಬ್ರವರಿ ೦೩ರಂದು ಸಂಜೆ ೬.೩೦ಕ್ಕೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ೨೦೨೩-೨೪ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಎರಡನೇ ಅಭ್ಯಾಸೀ ಪ್ರಯೋಗ, ಹೆಸರಾಂತ ರಂಗಕರ್ಮಿ ಡಾ.ಶ್ರೀಪಾದ ಭಟ್ ನಿರ್ದೇಶನದ ‘ಕನ್ನಡ ಕಾವ್ಯಕಣಜ’ ನಾಟಕವನ್ನು ಪ್ರದರ್ಶನಗೊಳಿಸಲಿದ್ದಾರೆ ಎಂದರು.

ಇನ್ನು, ಫೆಬ್ರವರಿ ೦೪ರಂದು ಸಂಜೆ ೦೬.೩೦ಕ್ಕೆ ರಂಗದಾಸೋಹ (ರಿ), ಬೆಂಗಳೂರು ಅಭಿನಯಿಸುವ, ಎನ್.ಸಿ. ಮಹೇಶ್ ನಿರ್ದೇಶನದ ‘ನೀ ಒಥೆಲೋವಾದರೆ, ನಾ ಇಯಾಗೊ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : ೭೨೫೯೫೩೭೭೭೭, ೯೪೮೦೪೬೮೩೨೭, ೯೮೪೫೫೯೫೫೦೫

‘ಕನ್ನಡ ಕಾವ್ಯಕಣಜ’ ನಾಟಕದ ಕುರಿತು: ಇದೊಂದು ಕಾವ್ಯ ಪ್ರಯೋಗ. ಕಾವ್ಯ ಪ್ರಸ್ತುತಿ. ಕನ್ನಡ ನಾಡು ನುಡಿ ಇದುವರೆಗೂ ಬೆಳೆಸಿಕೊಂಡು ಬಂದ ಸಂಬಂಧದ ವಿವಿಧ ವಿನ್ಯಾಸಗಳನ್ನು ಕವಿ ಪದಗಳ ಮೂಲಕ ಕಾಣಲಾಗಿದೆ. ಇಲ್ಲಿ ಶಾಸನಗಳಿವೆ, ಕವನಗಳಿವೆ, ಹಾಡಿದೆ, ವಚನವಿದೆ, ಕತೆಗಳಿವೆ, ಕಾದಂಬರಿಯ ಭಾಗಗಳಿವೆ. ಇವೆಲ್ಲವೂ ನಟರ ಶರೀರ ಮತ್ತು ಶಾರೀರಗಳನ್ನು ಆಧರಿಸಿ ಅಭಿನೀತಗೊಳ್ಳಲಿದೆ. ಕನ್ನಡ ಕಾವ್ಯ ಕಣಜ, ಕನ್ನಡ ಕಾವ್ಯಗಳ ರಂಗಪ್ರಸ್ತುತಿ. ಶಾಸನ ಪದಗಳಿಂದ ಆರಂಭಿಸಿ ಈ ಹೊತ್ತಿನವರೆಗಿನ ಸಾಹಿತ್ಯ ಚರಿತ್ರೆಯನ್ನು ಅನುಲಕ್ಷಿಸಿ ಅವುಗಳಲ್ಲಿ ಕೆಲವು ಪಠ್ಯಗಳನ್ನು ಆಯ್ದು ಪ್ರಸ್ತುತ ಪಡಿಸಲಾಗುತ್ತಿದೆ. ಇಲ್ಲಿ ಆದರ್ಶ ಮನುಷ್ಯರ ಹುಡುಕಾಟವಿದೆ; ಸಂಬಂಧಗಳ ವಿವಿಧ ಸ್ವರೂಪಗಳ ಅನ್ವೇಷಣೆಯಿದೆ. ವರ್ಣ, ವರ್ಗ, ಲಿಂಗ ತಾರತಮ್ಯಗಳ ಸ್ವರೂಪ ಕಾರಣಗಳ ಹುಡುಕಾಟದ ಪ್ರಯತ್ನವೂ ಇಲ್ಲಿದೆ. ಕಾವ್ಯಗಳನ್ನು ರಂಗದ ಮೇಲೆ ಪ್ರಯೋಗಿಸಬಹುದಾದ ಹಲವು ಮಾದರಿಗಳ ಪ್ರಸ್ತುತಿಯೂ ಇಲ್ಲಿದೆ.‘ನೀ ಒಥೆಲೋವಾದರೆ, ನಾ ಇಯಾಗೊ’ ನಾಟಕದ ಕುರಿತು: ಇದು ಶೇಕ್ಸ್ಪಿಯರ್‌ನ ಒಥೆಲೋ ನಾಟಕದ ರೂಪಾಂತರ. ಒಂದರ್ಥದಲ್ಲಿ ಸಮಕಾಲೀನ ರೂಪ. ಮೂಲ ನಾಟಕದಲ್ಲಿನ ರಾಜಪ್ರಭುತ್ವ ಮತ್ತು ಯುದ್ಧ, ಹೋರಾಟಗಳು ಈ ನಾಟಕದಲ್ಲಿ ಇಂದಿನ ವಿದ್ಯಮಾನದ ಪರ್ಯಾಯ ರೂಪಗಳನ್ನು ಪಡೆದುಕೊಂಡಿದೆ. ಮೂಲ ಕಥೆಯ ಚೌಕಟ್ಟಿನ ಒಳಗೆ ಇಂದಿನ ಬದುಕಿನ ಗತಿಯನ್ನು ಚಿತ್ರಿಸಲಾಗಿದೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago