Mysore
25
overcast clouds

Social Media

ಬುಧವಾರ, 17 ಜೂನ್ 2026
Light
Dark

ಎಕ್ಸಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ

ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್‌ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್‌ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್‌ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.


ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!