ಜಿಲ್ಲೆಗಳು

ಎಕ್ಸಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ

ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್‌ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್‌ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್‌ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.


ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

47 mins ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

1 hour ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

1 hour ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

2 hours ago