ಜಿಲ್ಲೆಗಳು

ಎಕ್ಸಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ

ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್‌ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್‌ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್‌ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.


ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್‌ ಟ್ರೋಫಿಗೆ ಚಾಲನೆ

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…

1 hour ago

ಹಲವು ಹೊಸ ದಾಖಲೆಗಳಿಗೆ ಷರಾ ಬರೆದ 2025

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…

1 hour ago

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…

1 hour ago

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

9 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

14 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

14 hours ago