ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ
ಮೈಸೂರು: ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.
ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…