ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ
ಮೈಸೂರು: ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.
ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…