ಜಿಲ್ಲೆಗಳು

ಎಕ್ಸಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ

ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್‌ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್‌ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್‌ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.


ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago