ಜಿಲ್ಲೆಗಳು

ಎಕ್ಸಪ್ರೆಸ್ ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ

ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್‌ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್‌ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್‌ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.


ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

7 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

12 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

12 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago