ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ
ಮೈಸೂರು: ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು.
ಮೈಸೂರಿನ ಕೆಆರ್ಎಸ್, ಬನ್ನೂರು ವರ್ತುಲ ರಸ್ತೆ ಜಂಕ್ಷನ್ (ಮಣಿಪಾಲ್ ಹಾಸ್ಪಿಟಲ್) ಸಿಗ್ನಲ್ ಬಳಿಯೇ ವಾಹನಗಳ ವರ್ಗೀಕರಣ ನಡೆಯಲಿದೆ.
ಈ ದಶಪಥ ಹೈವೇ ಜತೆಗಿರುವ ಸರ್ವೀಸ್ ರಸ್ತೆಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ಸಿಗಲಿದೆ. ಎಡ- ಬಲದಲ್ಲಿ ಒಟ್ಟು ನಾಲ್ಕು ಪಥದ ಸರ್ವೀಸ್ ರಸ್ತೆ ಇರಲಿದೆ. ಅಪಘಾತಗಳನ್ನು ತಡೆಯುವುದು ಇದರ ಉದ್ದೇಶ ಎಂದು ಸರ್ಕಾರ ಹೇಳಿದೆ.
ನಾಲ್ಕು ಚಕ್ರ ಹಾಗೂ ಮೇಲ್ಪಟ್ಟ ವಾಹನಗಳಿಗೆ ಮಾತ್ರ 6 ಪಥದ ಎಕ್ಸ್ಪ್ರೆಸ್ ಹೈವೇಗೆ ಪ್ರವೇಶ ಸಿಗಲಿದೆ. ಎಕ್ಸ್ಪ್ರೆಸ್ ಹೈವೇನಲ್ಲಿ ನಿಗದಿತ ವೇಗಕ್ಕಿಂತ ಕಡಿಮೆ ವೇಗದಲ್ಲಿ ಹೋದರೆ ದಂಡ ಕಟ್ಟಬೇಕು. ಈ ನಿಯಮ ಆಗ್ರಾ-ದಿಲ್ಲಿ, ಮುಂಬಯಿ- ಪುಣೆ ಎಕ್ಸ್ಪ್ರೆಸ್ ಹೈವೇಗಳಲ್ಲಿ ಜಾರಿಯಾಗಿದೆ.
ಸ್ಥಳೀಯರ ವಿರೋಧ: ಬೆಂಗಳೂರು ಮೈಸೂರು ದಶಪಥದ ಹೆದ್ದಾರಿುಂಲ್ಲಿ ಬೈಕ್, ಆಟೋಗಳ ಓಡಾಟಕ್ಕೆ ಹೆದ್ದಾರಿ ಪ್ರಾಧಿಕಾರ ನಿರ್ಬಂಧ ವಿಧಿಸಿರುವುದಕ್ಕೆ ಸ್ಥಳೀಯರು ವಿರೋಧಿಸಿದ್ದಾರೆ. ಹೆದ್ದಾರಿಗಾಗಿ ನಾವು ಭೂಮಿ ಕಳೆದುಕೊಂಡಿದ್ದೇವೆ. ನಮ್ಮ ವಾಹನಗಳ ಓಡಾಡ ಬೇಡ ಅಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಆಟೋಗಳ ಚಾಲನೆಗೆ ಹೆದ್ದಾರಿಯ ಒಂದು ಬದಿಉಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…