ಮಂಡ್ಯ : ನಗರದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಿಗ್ಗೆ 9.10 ರ ಸುಮಾರಿಗೆ ಸಂಭವಿಸಿದೆ.
ಬೆಂಗಳೂರಿನಿಂದ ಮಂಡ್ಯಕ್ಕೆ ಬಂದಿಳಿದ ಕಾಚಿಗೂಡ ರೈಲಿನಿಂದ ಬಂದಿಳಿದ ಮಹಿಳೆಯರು ಮೈಸೂರಿನಿಂದ ಬರುತ್ತಿದ್ದ ಮೈಲಾಡು ತೊರೈ ರೈಲು ಬರುತ್ತಿರುವುದು ಗಮನಕ್ಕೆ ಬಾರದೆ ತರಾತುರಿಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದಾರೆ. ಇಬ್ಬರು ಮಹಿಳೆಯರಿಗೆ ಸುಮಾರು 35 ಮತ್ತು 50 ವರ್ಷವಾಗಿರಬಹುದು ಎನ್ನಲಾಗಿದೆ.ಕೆಲವರು ಶಿವಳ್ಳಿ ಗ್ರಾಮದ ಕಡೆಯ ಅಮ್ಮ ಮಗಳು ಎಂದು ಹೇಳುತ್ತಿದ್ದು,ನಿಖರ ಮಾಹಿತಿ ಇನ್ನಷ್ಟೇ ಪತ್ತೆ ಯಾಗಬೇಕಿದೆ.
ಸ್ಥಳಕ್ಕೆ ರೈಲ್ವೆ ಪೋಲಿಸರು ಬಂದು ಅವರ ಬ್ಯಾಗ್ ಗಳನ್ನು ಏನಾದರೂ ಮಾಹಿತಿ ದೊರಕಬಹುದೆಂದು ಪರಿಶೀಲನೆ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…