ಜಿಲ್ಲೆಗಳು

ಉದ್ದನೂರು ಮಲ್ಲಣ್ಣ ಅವರಿಗೆ ‘ಪ್ರೊಫೆಸರ್ ಮಲ್ಲೇಪುರಂ ಪುರಸ್ಕಾರ’

ಹನೂರು: ಕಳೆದ 30 ವರ್ಷಗಳಿಂದ ನಮ್ಮ ಸಂಸ್ಕೃತ ಭಾಷೆ ವಿಭಾಗದಲ್ಲಿ ಸೇವೆ ಸಲ್ಲಿಸಿ ಸಾಧನೆಗೈದಿರುವ ಸಂಸ್ಕೃತ ವಿಷಯ ಪರಿವೀಕ್ಷಕ ಮಲ್ಲಣ್ಣ ರವರಿಗೆ ‘ಪ್ರೊಫೆಸರ್ ಮಲ್ಲೇಪುರಂ ಪುರಸ್ಕಾರ’ ಲಭಿಸಿದೆ.

ಶ್ರೀ ಫಲಹಾರ ಪ್ರಭುದೇವಸ್ವಾಮಿ ಸಂಸ್ಕೃತ ಪಾಠಶಾಲೆ ಹನೂರು ಮುಖ್ಯ ಶಿಕ್ಷಕರು ಹಾಗೂ ಮೈಸೂರು ವಲಯದ ವಿಷಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ವಾನ್ ಉದ್ದನೂರು ಮಲ್ಲಣ್ಣ ಅವರೇ ಈ ಗೌರವಕ್ಕೆ ಪಾತ್ರರಾಗಿರುವವರು.

ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಮಲ್ಲೆಪುರಂ ಜಿ.ವೆಂಕಟೇಶ್ ಅವರ ಹೆಸರಿನಲ್ಲಿ ಎಲೆಮರೆಯ ಸಂಸ್ಕೃತ ಸಾಧಕರಿಗೆ ಕೂಡಮಾಡಲಾಗುವ ‘ಪ್ರೊ.ಮಲ್ಲೇಪುರಂ ಪುರಸ್ಕಾರ’ಕ್ಕೆ ಭಾಜನರಾದ ರಾಜ್ಯದ ಐವರು ಸಾಧಕರ ಪೈಕಿ ಐವರ ಪೈಕಿ ಉದ್ದನೂರು ಮಲ್ಲಣ್ಣ ಕೂಡ ಒಬ್ಬರು.

7.2.1992 ರಿಂದ ಇಲ್ಲಿಯವರೆಗೆ ಸುಮಾರು 30 ವರ್ಷಗಳ ಸುಧೀರ್ಘ ಸೇವೆಯನ್ನು ಸಂಸ್ಕೃತ ಕ್ಷೇತ್ರಕ್ಕೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಂಸ್ಕೃತ ಮುಖ್ಯ ಶಿಕ್ಷಕ ಉದ್ದನೂರು ಮಲ್ಲಣ್ಣ ಅವರಿಗೆ ಈ ಗೌರವ ಸಂದಿದೆ.

ಬೆಂಗಳೂರಿನ ಕನ್ನಡ ಭವನ ನಯನ ಸಭಾಂಗಣದಲ್ಲಿ ನಾಡೋಜ ಶ್ರೀ ಜಗದೀಶ ಶಿವಯ್ಯ ಗುಡಗುಂಟಿ ಮಠ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಭುಲಿಂಗೇಶ್ವರ ಶುಗರ್ ಮತ್ತು ಕೆಮಿಕಲ್ ಲಿ. ಜಮಖಂಡಿ ಪುರಸ್ಕಾರವನ್ನು ಪ್ರಧಾನ ಮಾಡಿದರು. ಎಂ.ಡಿ. ಶೈಲಜಾ ಉದಯ ಪ್ರಕಾಶನ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರ್ಜಗಿ, ನ್ಯಾಕ್ ಸಂಸ್ಥೆ ನಿರ್ದೇಶಕರಾದ ಡಾ. ಎಸ್.ಸಿ.ಶರ್ಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಬಿ.ವಿ. ವಸಂತಕುಮಾರ್ ಇನ್ನಿತರರೂ ಉಪಸಿತರಿದ್ದರು.

andolanait

Recent Posts

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

5 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

34 mins ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

2 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

2 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

2 hours ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

3 hours ago