ಜಿಲ್ಲೆಗಳು

ಉದ್ದನೂರು ಮಲ್ಲಣ್ಣ ಅವರಿಗೆ ‘ಪ್ರೊಫೆಸರ್ ಮಲ್ಲೇಪುರಂ ಪುರಸ್ಕಾರ’

ಹನೂರು: ಕಳೆದ 30 ವರ್ಷಗಳಿಂದ ನಮ್ಮ ಸಂಸ್ಕೃತ ಭಾಷೆ ವಿಭಾಗದಲ್ಲಿ ಸೇವೆ ಸಲ್ಲಿಸಿ ಸಾಧನೆಗೈದಿರುವ ಸಂಸ್ಕೃತ ವಿಷಯ ಪರಿವೀಕ್ಷಕ ಮಲ್ಲಣ್ಣ ರವರಿಗೆ ‘ಪ್ರೊಫೆಸರ್ ಮಲ್ಲೇಪುರಂ ಪುರಸ್ಕಾರ’ ಲಭಿಸಿದೆ.

ಶ್ರೀ ಫಲಹಾರ ಪ್ರಭುದೇವಸ್ವಾಮಿ ಸಂಸ್ಕೃತ ಪಾಠಶಾಲೆ ಹನೂರು ಮುಖ್ಯ ಶಿಕ್ಷಕರು ಹಾಗೂ ಮೈಸೂರು ವಲಯದ ವಿಷಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ವಿದ್ವಾನ್ ಉದ್ದನೂರು ಮಲ್ಲಣ್ಣ ಅವರೇ ಈ ಗೌರವಕ್ಕೆ ಪಾತ್ರರಾಗಿರುವವರು.

ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಮಲ್ಲೆಪುರಂ ಜಿ.ವೆಂಕಟೇಶ್ ಅವರ ಹೆಸರಿನಲ್ಲಿ ಎಲೆಮರೆಯ ಸಂಸ್ಕೃತ ಸಾಧಕರಿಗೆ ಕೂಡಮಾಡಲಾಗುವ ‘ಪ್ರೊ.ಮಲ್ಲೇಪುರಂ ಪುರಸ್ಕಾರ’ಕ್ಕೆ ಭಾಜನರಾದ ರಾಜ್ಯದ ಐವರು ಸಾಧಕರ ಪೈಕಿ ಐವರ ಪೈಕಿ ಉದ್ದನೂರು ಮಲ್ಲಣ್ಣ ಕೂಡ ಒಬ್ಬರು.

7.2.1992 ರಿಂದ ಇಲ್ಲಿಯವರೆಗೆ ಸುಮಾರು 30 ವರ್ಷಗಳ ಸುಧೀರ್ಘ ಸೇವೆಯನ್ನು ಸಂಸ್ಕೃತ ಕ್ಷೇತ್ರಕ್ಕೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸಂಸ್ಕೃತ ಮುಖ್ಯ ಶಿಕ್ಷಕ ಉದ್ದನೂರು ಮಲ್ಲಣ್ಣ ಅವರಿಗೆ ಈ ಗೌರವ ಸಂದಿದೆ.

ಬೆಂಗಳೂರಿನ ಕನ್ನಡ ಭವನ ನಯನ ಸಭಾಂಗಣದಲ್ಲಿ ನಾಡೋಜ ಶ್ರೀ ಜಗದೀಶ ಶಿವಯ್ಯ ಗುಡಗುಂಟಿ ಮಠ ಸಂಸ್ಥಾಪಕ ಅಧ್ಯಕ್ಷರು ಶ್ರೀ ಪ್ರಭುಲಿಂಗೇಶ್ವರ ಶುಗರ್ ಮತ್ತು ಕೆಮಿಕಲ್ ಲಿ. ಜಮಖಂಡಿ ಪುರಸ್ಕಾರವನ್ನು ಪ್ರಧಾನ ಮಾಡಿದರು. ಎಂ.ಡಿ. ಶೈಲಜಾ ಉದಯ ಪ್ರಕಾಶನ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ವಹಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞರಾದ ಡಾ. ಗುರುರಾಜ್ ಕರ್ಜಗಿ, ನ್ಯಾಕ್ ಸಂಸ್ಥೆ ನಿರ್ದೇಶಕರಾದ ಡಾ. ಎಸ್.ಸಿ.ಶರ್ಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಬಿ.ವಿ. ವಸಂತಕುಮಾರ್ ಇನ್ನಿತರರೂ ಉಪಸಿತರಿದ್ದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

6 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

6 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago