ಜಿಲ್ಲೆಗಳು

‘ಯುಜಿ ಕೇಬಲ್ ಅಳವಡಿಕೆ: ಪ್ರತಿ ಕಿ.ಮೀ 60 ಸಾವಿರ ರೂ. ನಿಗದಿ’

ಕಾನೂನು ಅಭಿಪ್ರಾಯ ಪಡೆದು ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಿಗೆ ಖಾತೆ ಮಾಡಲು ನಿರ್ಧಾರ

ಮೈಸೂರು: ನಗರಪಾಲಿಕೆ ವ್ಯಾಪ್ತಿುಂಲ್ಲಿ ಬೇಕಾಬಿಟ್ಟಿ ಓವರ್ ಹೆಡ್ ಕೇಬಲ್ ಅಳವಡಿಸಿರುವುದನ್ನು ಒಂದು ತಿಂಗಳಿನಲ್ಲಿ ತೆರವುಗೊಳಿಸುವ ಜತೆಗೆ ಪ್ರತಿ ಕಿ.ಮೀ.ಗೆ ಸುಮಾರು 6 ಓಪನ್ ಟ್ರಂಚ್ ಬಳಸಿ ಕೇಬಲ್ ಅಳವಡಿಸಲಾಗುತ್ತಿದ್ದು, ಪ್ರತಿ ಟ್ರಂಚ್‌ಗೆ 10 ಸಾವಿರ ರೂ.ನಂತೆ 1 ಕಿ.ಮೀ.ಗೆ 60 ಸಾವಿರ ರೂ. ದರ ನಿಗದಿಪಡಿಸಲು ಗುರುವಾರ ನಡೆದ ನಗರಪಾಲಿಕೆ ಕೌನ್ಸಿಲ್ ಸಭೆ ಅನುಮೋದನೆ ನೀಡಿತು.
ಎಚ್‌ಡಿಡಿ ಮೂಲಕ ಕೇಬಲ್ ಅಳವಡಿಸಲು ನಗರಪಾಲಿಕೆಯಲ್ಲಿ ದರ ನಿಗದಿಯಾಗಿತ್ತು. ಆದರೆ, ಎಚ್‌ಡಿಡಿ ಮೂಲಕ ಯುಜಿ ಕೇಬಲ್ ಅಳವಡಿಸುವಾಗ ಪ್ರತಿ ಕಿ.ಮೀ.ಗೆ ಸುಮಾರು ೬ ಓಪನ್ ಟ್ರಂಚ್‌ಗಳನ್ನು ತೆಗೆಯಲಾಗುತ್ತಿದೆ. ಆದ್ದರಿಂದ ಪ್ರತಿ ಟ್ರಂಚ್‌ಗೆ ೧೦ ಸಾವಿರ ರೂ.ನಂತೆ ಪ್ರತಿ ಕಿ.ಮೀ.ಗೆ ೬೦ ಸಾವಿರ ರೂ. ದರ ನಿಗದಿಪಡಿಸಲು ತೀರ್ಮಾನಿಸಲಾಯಿತು.
ಕೇಬಲ್ ಅಳವಡಿಕೆ ಸಕ್ರಮಕ್ಕೆ ಜ.೧೫ರ ಗಡುವು: ನಗರದಲ್ಲಿ ಕೇಬಲ್ ಅಳವಡಿಕೆ ಸಂಬಂಧ ನಗರಪಾಲಿಕೆಯಿಂದ ಅನುಮತಿ ಪಡೆಯಲು ಜ.೧೫ರ ಗಡುವು ನೀಡಲಾಗಿದೆ. ಇಂದಿನಿಂದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಮೂರು ತಿಂಗಳಲ್ಲಿ ಯು.ಜಿ.ಕೇಬಲ್ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ಕ್ರಮ ಕೈಗೊಳ್ಳುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾನೂನು ಅಭಿಪ್ರಾಯನಂತರ ಅನುಷ್ಠಾನ: ನಗರಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳಲ್ಲಿ ನಗರಪಾಲಿಕೆಯಿಂದ ಪ್ರತಿ ಫ್ಲಾಟ್‌ಗಳಿಗೆ ಉಪ ನಂಬರ್ ಪಡೆದು ಪೂರ್ಣ ಪ್ರಮಾಣದಲ್ಲಿ ತೆರಿಗೆ ಪಾವತಿಸಲು ಸಾಧ್ಯವಾಗದ ಕಾರಣ ಕಾನೂನು ಅಭಿಪ್ರಾಯಪಡೆದು ಸ್ವತ್ತುಗಳಿಗೆ ಖಾತೆ ಮಾಡಿಕೊಡಲು ನಿರ್ಧರಿಸಲಾಯಿತು. .ಸಭೆಯಲ್ಲಿ ಉಪ ಮಹಾಪೌರ ಡಾ.ಜಿ. ರೂಪಾ,ಆಯುಕ್ತ ಜಿ.ಲಕ್ಷ್ಮಿಕಾಂತ್ ರೆಡ್ಡಿ ಹಾಜರಿದ್ದರು.

ನೀರಿನ ಶುಲ್ಕ ಏರಿಕೆಗೆ ಸರ್ವಾನುಮತದಿಂದ ಒಪ್ಪಿಗೆ
ನಾಲ್ಕು ಯೂನಿಟ್‌ಗಳು ಇರುವಂತಹ ಬಹುಮಹಡಿ ವಸತಿ ಸಮುಚ್ಛಯ ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಕುಡಿಯುವ ನೀರು ಸರಬರಾಜು ಬೇಡಿಕೆಯನ್ನು ಪೂರೈಸಲು ಮತ್ತು ಒಳಚರಂಡಿ ಸಂಪರ್ಕ ನೀಡಲು ಆಗುತ್ತಿರುವ ಹೊರೆಯನ್ನು ಪಾಲಿಕೆ ಭರಿಸುವುದು ಕಷ್ಟಕರವಾಗಿರುವ ಕಾರಣ ಆಯಾ ಕಟ್ಟಡಗಳ ಮಾಲೀಕರಿಂದ ಪ್ರತಿ ಯೂನಿಟ್‌ಗೆ ೫ ವ್ಯಕ್ತಿಗಳಂತೆ ಲೆಕ್ಕಚಾರ ಮಾಡಿ ಪ್ರೋರೇಟಾ ವೆಚ್ಚವನ್ನು ಹೆಚ್ಚಿಸಲು ತೀರ್ಮಾನಿಸಲಾಯಿತು.


ಕ್ಷೃಮೆಯಾಚನೆ ಪ್ರಹಸನ
ಮೈಸೂರು: ಕಳೆದ ಸಭೆಯಲ್ಲಿ ಮಾಜಿ ಮಹಾಪೌರ ಉಯೂಬ್‌ಖಾನ್ ಅವರು ನಿಮಗೆ ನಾಚಿಕೆ ಆಗಬೇಕು ಎಂದು ನೀಡಿದ್ದ ಹೇಳಿಕೆಗೆ ಕ್ಷೃಮೆ ಕೋರುವಂತೆ ಆಗ್ರಹಿಸಿ ಜಾ.ದಳ ಸದಸ್ಯರು ಗುರುವಾರದ ಸಭೆಯಲ್ಲಿ ಪಟ್ಟುಹಿಡಿದರು. ಅಲ್ಲದೆ ಎಂ.ಶ್ರೀನಿವಾಸ್ ಅವರು ಜಾ.ದಳ ಸದಸ್ಯರನ್ನು ಟೀಕಿಸಿದ್ದನ್ನು ಖಂಡಿಸಿದರು. ಈ ವೇಳೆ ಗದ್ದಲ ಉಂಟಾದ್ದರಿದ ಅರ್ಧ ಗಂಟೆ ಸಭೆ ಮುಂದೂಡಲಾಯಿತು.
ಸಭೆುಂ ಬಳಿಕ ಎಂ.ಶಿವಕುಮಾರ್ ಅವರು, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಬಳಸಿದ ಪದವನ್ನು ಹಿಂಪಡೆಯುವುದಾಗಿ ಹೇಳಿದರು. ಆದರೆ, ಉಯೂಬ್‌ಖಾನ್ ನಾನು ಅಸಂವಿಧಾನಿಕ ಪದ ಬಳಸಿಲ್ಲವಾದ್ದರಿಂದ ಕ್ಷಮೆ ಕೋರುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಧ್ಯಪ್ರವೇಶಿಸಿದರೂ ಪ್ರಯೋಜನವಾಗಲಿಲ್ಲ. ಬಳಿಕ ಎಸ್‌ಬಿಎಂ ಮಂಜು, ಕಾಂಗ್ರೆಸ್‌ನವರು ಬರೀ ಸುಳ್ಳು ಹೇಳುತ್ತಾರೆ ಎಂದು ಟೀಕಿಸುವ ಮೂಲಕ ಸೇಡು ತೀರಿಸಿಕೊಂಡರು. ಆಗ ಇಬ್ಬರು ಕ್ಷೃಮೆ ಕೋರದೆ ಸಭೆ ಮುಂದುವರಿಸಿದರು.

 

andolanait

Recent Posts

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

11 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

24 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

32 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

49 mins ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

1 hour ago

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…

1 hour ago